ಕನಕಪುರ: ಜಮೀನಿನಲ್ಲಿ ನಾಟಿ ಮಾಡಿದ್ದ ತೆಂಗಿನ ಸಸಿ ಮತ್ತು ಪಂಪ್ಸೆಟ್ಗೆ ಹಾಕಿದ್ದ ಕೇಬಲ್ ವೈರ್ ಕಳವು ಮಾಡಿರುವ ಘಟನೆ ತಾಮಸಂದ್ರ ಸರ್ಕಲ್ನಲ್ಲಿ ನಡೆದಿದೆ. ಈ ಸಂಬಂಧ ಜಮೀನಿನ ಮಾಲೀಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಗ್ರಾಮದ ಟಿ.ಜಿ.ನಾರಾಯಣ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಕಳವು ನಡೆದಿದೆ. ಈ ಹಿಂದೆ ಕೂಡ ಎರಡು ಬಾರಿ ಕಳವು ನಡೆದಿತ್ತು. ಆ ಸಂದರ್ಭದಲ್ಲಿಯೇ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಆದರೆ, ಪೊಲೀಸರು ಯಾವುದೇ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರಿಂದ ಮತ್ತೆ ಕಳವು ನಡೆದಿದೆ ಎಂದು ಜಮೀನಿನ ಮಾಲೀಕ ಟಿ.ಜಿ.ನಾರಾಯಣ್ ದೂರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.