ADVERTISEMENT

ಸೂಲಿಬೆಲೆ: ಹೂ ಬೆಳೆ ನಷ್ಟ ಪರಿಹಾರ; ಅಂತಿಮ ಅವಕಾಶ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 17:17 IST
Last Updated 17 ಆಗಸ್ಟ್ 2020, 17:17 IST

ಸೂಲಿಬೆಲೆ: ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕೋವಿಡ್-19ರ ಪ್ರಯುಕ್ತ ನಷ್ಟಕ್ಕೊಳಗಾದ ಹೂ ಬೆಳೆಗಾರರಿಗೆ ಪರಿಹಾರವನ್ನು ಸರ್ಕಾರ ಈಗಾಗಲೇ ಘೋಷಣೆ ಮಾಡಿದ್ದು, 2019-20ನೇ ಬೆಳೆ ಸಮೀಕ್ಷೆಯಲ್ಲಿರುವ ರೈತರಿಗೆ ಡಿಬಿಟಿ ಮುಖಾಂತರ ಪರಿಹಾರವನ್ನು ವಿತರಿಸಲಾಗುತ್ತಿದೆ.

ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೈತ ಬಾಂದವರು ದಾಖಲಾತಿಗಳನ್ನು ಸಲ್ಲಿಸದ ಕಾರಣ ಪರಿಹಾರ ವಿತರಿಸಲು ಕಷ್ಟವಾಗುತ್ತಿದ್ದು, ಇದು ಪರಿಹಾರ ಪಡೆಯಲು ಅಂತಿಮ ಅವಕಾಶವಾಗಿದೆ. ರೈತರು ಆಗಸ್ಟ್ 19ರ ಒಳಗೆ ಕಚೇರಿಗೆ ದಾಖಲಾತಿಗಳನ್ನು ಸಲ್ಲಿಸಿ ಹೂ ಬೆಳೆ ನಷ್ಟ ಪರಿಹಾರವನ್ನು ಪಡೆಯಬೇಕು ಎಂದು ಹಿರಿಯ ತೋಟಗಾರಿಕೆ ನಿರ್ದೇಶಕ ಪ್ರಶಾಂತ್‌ ಆರ್‌. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ದಾಖಲೆಗಳನ್ನು ತಾಲ್ಲೂಕು ತೋಟಗಾರಿಕೆ ಕಚೇರಿ ಅಥವಾ ಸಂಬಂಧಪಟ್ಟ ಹೋಬಳಿ ಅಧಿಕಾರಿಗಳಿಗೆ ಸಲ್ಲಿಸುವುದು.

ADVERTISEMENT

ಹೆಚ್ಚಿನ ಮಾಹಿತಿಗೆ ಸಹಾಯಕ ತೋಟಗಾರಿಕಾ ನಿರ್ದೇಶಕ ಸೋಮಶೇಖರ್ ಗೌಡ (ಮೊ. 9483478162, 7996881865, 8722117133) ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.