ADVERTISEMENT

ಪಕ್ಷ ಸಂಘಟನೆಗೆ ಶಕ್ತಿ ತುಂಬಿದ ಪ್ರಜಾಧ್ವನಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2023, 4:49 IST
Last Updated 7 ಫೆಬ್ರುವರಿ 2023, 4:49 IST

ವಿಜಯಪುರ(ದೇವನಹಳ್ಳಿ): ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ಯಶಸ್ವಿಯಾಗಿ ನಡೆದಿದ್ದು, ಇದರಿಂದ ಈ ಭಾಗದಲ್ಲಿ ಪಕ್ಷ ಇನ್ನುಷ್ಟು ಬಲಿಷ್ಠಗೊಳ್ಳುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ರಾಮಚಂದ್ರಪ್ಪ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು. ಇದು ಪಕ್ಷ ಸಂಘಟನೆಗೆ ಮತ್ತಷ್ಟು ಶಕ್ತಿ ತುಂಬಿದೆ ಎಂದರು.

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾಂಗ್ರೆಸ್ ಮುಖಂಡರಿಗೆ ಗಾಳ ಹಾಕುತ್ತಿದ್ದಾರೆ. ಆದರೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಬೇರೆ ಪಕ್ಷಕ್ಕೆ ಹೋಗುತ್ತಿಲ್ಲ. ಬದಲಿಗೆ ಪಕ್ಷಕ್ಕೆ ಸೇರ್ಪಡೆ ಯಾಗುವವರ ಸಂಖ್ಯೆ ಜಾಸ್ತಿಯಾಗಿದೆ ಎಂದರು.

ADVERTISEMENT

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, ಫೆ.25 ರಂದು ಕೋರಮಂಗಲ ಹಾಗೂ ಹಾರೋಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ಲಕ್ಷ್ಮೀನಾರಾಯಣಪ್ಪ, ಟೌನ್ ಕಾಂಗ್ರೆಸ್ ಅಧ್ಯಕ್ಷ ವಿ.ಎಂ.ನಾಗರಾಜ್, ಖಾದಿಬೋರ್ಡ್ ಅಧ್ಯಕ್ಷ ಮುನಿರಾಜು, ಎಂ.ವೀರಣ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.