ADVERTISEMENT

ಹಾರೋಹಳ್ಳಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ಬಿರುಸಿನ ಪ್ರಚಾರ

​ಪ್ರಜಾವಾಣಿ ವಾರ್ತೆ
Published 3 ಮೇ 2019, 16:18 IST
Last Updated 3 ಮೇ 2019, 16:18 IST
ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮುಖಂಡರು ಚುನಾವಣಾ ಪ್ರಚಾರ ನಡೆಸಿದರು
ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮುಖಂಡರು ಚುನಾವಣಾ ಪ್ರಚಾರ ನಡೆಸಿದರು   

ಹಾರೋಹಳ್ಳಿ (ಕನಕಪುರ): ಹಾರೋಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮುಖಂಡರು ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡರು.

ಸಂಸದ ಡಿ.ಕೆ.ಸುರೇಶ್‌ ಅವರನ್ನು ಬೆಂಬಲಿಸಿ ಅತಿ ಹೆಚ್ಚಿನ ಬಹುಮತ ನೀಡುವಂತೆ ಮತದಾರರಲ್ಲಿ ವಿನಂತಿಸಲಾಯಿತು. ಕುಡಿಯುವ ನೀರು, ಕೆರೆ ತುಂಬಿಸುವುದು, ರಸ್ತೆ ವಿಸ್ತರಣೆ, ನರೇಗಾ ಯೋಜನೆ ‍ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಎಚ್‌.ಕೆ.ನಾಗರಾಜು, ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀಕಂಠಯ್ಯ, ಮುಖಂಡರಾದ ಭುಜಂಗಯ್ಯ, ಎಂ.ಮಲ್ಲಪ್ಪ, ಹರೀಶ್‌ಕುಮಾರ್‌, ಮೂರ್ತಿ, ಶೇಖರ್‌, ಮೋಹನ್‌ಹೊಳ್ಳ, ಅಶೋಕ್‌, ಗುರುಪ್ರಸಾದ್‌, ನಿಯಾಮತ್‌, ದಿನೇಶ್‌, ಮಲ್ಲಯ್ಯ, ಬಾಲಾಜಿ, ಸೋಮಣ್ಣ, ಜಗದೀಶ್‌ಗೌಡ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.