ದೊಡ್ಡಬಳ್ಳಾಪುರ: ಎರಡು ಬಾರಿ ಪ್ರಧಾನಿ ಆಗಿರುವ ಮೋದಿ ಅವರ ಜನಪ್ರಿಯತೆ ಅವರೇ ಮೂರನೇ ಬಾರಿಯೂ ಪ್ರಧಾನಿ ಆಗಬೇಕು ಎನ್ನುವ ಬಯಕೆ ಎಲ್ಲೆಡೆ ವ್ಯಕ್ತವಾಗುತ್ತಿದೆ. ಆದರೆ ಕಾಂಗ್ರೆಸ್ ಮುಖಂಡರು ತನ್ನ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಘೊಷಸಲಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದರು.
ಬುಧವಾರ ನಗರದಲ್ಲಿ ರೋಡ್ ಶೋನಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.
ಕಾಂಗ್ರೆಸ್ಗೆ ರಾಜ್ಯದಲ್ಲಿ 28 ಗೆಲ್ಲುತ್ತೇವೆ ಎನ್ನುವುದು ಭ್ರಮೆ. ಇಡೀ ದೇಶದಲ್ಲಿ ಇಂಡಿಯಾ ಮೈತ್ರಿ ಕೂಟ 45 ಸ್ಥಾನ ಗೆದ್ದರೆ ಪುಣ್ಯ. ರಾಜ್ಯದ ಜನತೆ ಮೋದಿ ಗ್ಯಾರೆಂಟಿ ನಂಬುತ್ತಾರೆಯೇ ಹೊರತು, ರಾಜ್ಯದ ಗ್ಯಾರೆಂಟಿಗಳನ್ನು ಅಲ್ಲ ಎಂದು ಹೇಳಿದರು.
ರೋಡ್ ಶೋನಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್, ಶಾಸಕ ಧೀರಜ್ ಮುನಿರಾಜು, ಬಿಜೆಪಿ ಹಿರಿಯ ಮುಖಂಡ ಕಟ್ಟಾಸುಬ್ರಹ್ಮಣ್ಯ ನಾಯ್ಡು, ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್.ಎಂ.ಹರೀಶ್ಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಎಚ್.ಅಪ್ಪಯ್ಯಣ್ಣ, ಬಿ.ಸಿ.ನಾರಾಯಣಸ್ವಾಮಿ, ಕೆ.ಎಂ.ಹನುಮಂತರಾಯಪ್ಪ, ಪುಷ್ಪಾಶಿವಶಂಕರ್, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ನಾಗೇಶ, ನಗರ ಘಟಕದ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಜೆಡಿಎಸ್ ನಗರ ಅಧ್ಯಕ್ಷ ವಿ.ಎಸ್.ರವಿಕುಮಾರ್,ತಾಲ್ಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.