ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಗುರುವಾರ ದೇವಾಲಯವನ್ನು ಬಂದ್ ಮಾಡಲಾಗುವುದು. ಭಕ್ತರಿಗೆ ಪ್ರವೇಶ ಇರುವುದಿಲ್ಲ.
ಬುಧವಾರ ಮಧ್ಯಾಹ್ನದಿಂದಲೇ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಗುರುವಾರ ಸಂಜೆ ನಂತರ ದೇವಾಲಯಕ್ಕೆ ಸ್ಯಾನಿಟೈಸರ್ ಮಾಡಲಾಗುವುದು. ಶುಕ್ರವಾರ ಬೆಳಿಗ್ಗೆಯಿಂದ ದಿನ ನಿತ್ಯದಂತೆ ಪೂಜೆ ಹಾಗೂ ಭಕ್ತಾದಿಗಳಿಗೆ ದೇವರ ದರ್ಶನ ಇರಲಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ತಿಳಿಸಿದ್ದಾರೆ.
ಘಾಟಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕೂಡ ಕೊರೊನಾ ಸೋಂಕಿಗೆ ಒಳಗಾಗಿರುವುದರಿಂದ ಪಂಚಾಯಿತಿ ಕಾರ್ಯಾಲಯವನ್ನು ಗುರುವಾರ ಸಿಲ್ಡೌನ್ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.