ADVERTISEMENT

ನಿಂತಿದ್ದ ಕ್ರೇನ್‌ಗೆ ಗುದ್ದಿದ ಲಾರಿ

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 15:43 IST
Last Updated 5 ಜೂನ್ 2020, 15:43 IST
ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದ ಬಳಿ ಕ್ರೇನ್‌ಗೆ ಡಿಕ್ಕಿ ಹೊಡೆದಿರುವ ಲಾರಿ
ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದ ಬಳಿ ಕ್ರೇನ್‌ಗೆ ಡಿಕ್ಕಿ ಹೊಡೆದಿರುವ ಲಾರಿ   

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಕ್ರೇನ್‌ಗೆ ಗುದ್ದಿರುವ ಘಟನೆ ನಗರದ ಪ್ರವಾಸಿ ಮಂದಿರದ ಬಳಿ ಗುರುವಾರ ರಾತ್ರಿ ನಡೆದಿದೆ.

ಗೌರಿಬಿದನೂರಿಗೆ ತೆರಳುತ್ತಿದ್ದ ಲಾರಿಯ ಮುಂದಿನ ಚಕ್ರ ಸಿಡಿದ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ರೇನ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದ್ದು, ಎರಡೂ ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT