ದಾಬಸ್ಪೇಟೆ: ಇಲ್ಲಿಗೆ ಸಮೀಪದ ಹೊನ್ನೇನಹಳ್ಳಿ ಹಾಗೂ ಬರಗೇನಹಳ್ಳಿ ಗ್ರಾಮಗಳ ಎರಡು ಅಂಗಡಿಗಳ ಶಟರ್ ಮುರಿದು ಹಣ ಹಾಗೂ ಸಾಮಗ್ರಿಗಳನ್ನು ಕಳ್ಳತನ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಹೊನ್ನೇನಹಳ್ಳಿ ಗ್ರಾಮದ ರವಿಕುಮಾರ್ ಶಿವಗಂಗೆ ಮುಖ್ಯರಸ್ತೆಯಲ್ಲಿ ಚಿಲ್ಲರೆ ಅಂಗಡಿಯನ್ನಿಟ್ಟುಕೊಂಡಿದ್ದಾರೆ. ಎಂದಿನಂತೆ ವ್ಯಾಪಾರ ಮುಗಿಸಿ ಬೀಗ ಹಾಕಿಕೊಂಡು ಹೋಗಿದ್ದಾರೆ. ಶುಕ್ರವಾರ ಅಂಗಡಿ ಹತ್ತಿರ ಬಂದು ಬಾಗಿಲು ತೆರೆಯಲು ಹೋದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ₹10 ಸಾವಿರ ನಗದು ಹಾಗೂ ₹2 ಸಾವಿರ ಬೆಲೆಯ ಸಿಗರೇಟ್ ಪ್ಯಾಕ್ಗಳನ್ನು ಕದ್ದೊಯ್ದಿದ್ದಾರೆ.
ಅದೇ ರಾತ್ರಿ ಇದೇ ಶಿವಗಂಗೆ ರಸ್ತೆಗೆ ಹೊಂದಿಕೊಂಡಂತೆ ಇರುವ ಬರಗೇನಹಳ್ಳಿ ಗ್ರಾಮದ ಶಶಿಕುಮಾರ್ ಎಂಬುವರ ಚಿಲ್ಲರೆ ಅಂಗಡಿಯ ಶಟರ್ ಮುರಿದು ಸಿಗರೇಟ್ ಪ್ಯಾಕ್, ಸಣ್ಣಪುಟ್ಟ ಸಾಮಗ್ರಿಗಳು ಹಾಗೂ ₹8 ಸಾವಿರ ಕಳವು ಮಾಡಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.