
ಪ್ರಜಾವಾಣಿ ವಾರ್ತೆ
ಪೊಲೀಸ್
ಸಾಂದರ್ಭಿಕ ಚಿತ್ರ
ಸೂಲಿಬೆಲೆ (ಹೊಸಕೋಟೆ): ಭುವನಹಳ್ಳಿ ತನ್ನ ಜಮೀನಿನಲ್ಲಿ ಮದ್ಯ ಸೇವಿಸುತ್ತಿದ್ದನ್ನು ಪ್ರಶ್ನಿಸಿದ ಪರಿಶಿಷ್ಟ ಯುವಕನಿಗೆ ಕೊಲೆ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಅಭಿಲಾಷ್ ಅಲಿಯಾಸ್ ರಾಜಾ ಹುಲಿ ಎಂಬಾತನ ವಿರುದ್ಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣವನ್ನು ಹೊಸಕೋಟೆ ಡಿವೈಎಸ್ಪಿ ಸುಪರ್ದಿಗೆ ಒಪ್ಪಿಸಲಾಗಿದೆ. ಬುಧವಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ ಎಂದು ಸೂಲಿಬೆಲೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.