ADVERTISEMENT

ಘಾಟಿ ದೇಗುಲದಲ್ಲಿ ದರ್ಶನ

DODDABALLAPUR

​ಪ್ರಜಾವಾಣಿ ವಾರ್ತೆ
Published 7 ಜೂನ್ 2020, 14:58 IST
Last Updated 7 ಜೂನ್ 2020, 14:58 IST
ಸುಬ್ರಹ್ಮಣ್ಯಸ್ವಾಮಿ ಮೂಲ ಮೂರ್ತಿ
ಸುಬ್ರಹ್ಮಣ್ಯಸ್ವಾಮಿ ಮೂಲ ಮೂರ್ತಿ   

ದೊಡ್ಡಬಳ್ಳಾಪುರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಚ್ಚಿದ್ದ ತಾಲ್ಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯ ಜೂ8ರಂದು ತೆರೆಯಲಾಗುತ್ತಿದೆ. ಸರ್ಕಾರದ ಮಾರ್ಗ ಸೂಚಿಗಳನ್ನು ಭಕ್ತಾದಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ತಿಳಿಸಿದ್ದಾರೆ.

ಭಾನುವಾರ ದೇವಾಲಯವನ್ನು ಸಂಪೂರ್ಣ ಸ್ವಚ್ಛಗೊಳಿಸಲಾಯಿತು. ಸೋಮವಾರ ಭಕ್ತಾದಿಗಳು ಬಂದಾಗ ದೇವಾಲಯದಲ್ಲಿ ಕಡ್ಡಾಯವಾಗಿ ಅಂತರ ಕಾಪಾಡುವುದು, ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಲಾಗುವುದು. ಅನ್ನದಾಸೋಹ ಭವನದಲ್ಲಿ ಉಪಾಹಾರ ನೀಡುವ ಕುರಿತು ಇನ್ನೂ ತೀರ್ಮಾನ ಕೈಗೊಂಡಿಲ್ಲ.

ಬೆಳಿಗ್ಗೆ 6.30ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಅಭಿಷೇಕದ ವೇಳೆ ದೇವಾಲಯದ ಒಳಗೆ ಕುಳಿತುಕೊಳ್ಳಲು ಅವಕಾಶ ಇರುವುದಿಲ್ಲ. ಭಕ್ತಾದಿಗಳಿಗೆ ತೀರ್ಥ, ಪ್ರಸಾದ ನೀಡುವುದಿಲ್ಲ ಎಂದು ದೇವಾಲಯದ ಪ್ರಧಾನ ಅರ್ಚಕ ಗುರುರಾಜ ಶರ್ಮ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.