ADVERTISEMENT

ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಗೆ ಡಿಸಿಎಂ ಪೂಜೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2021, 5:45 IST
Last Updated 27 ಜೂನ್ 2021, 5:45 IST
ಕೆಂಪೇಗೌಡರ 512ನೇ ಜಯಂತಿ ನಿಮಿತ್ತ ಕೆಂಪಾಪುರ ಗ್ರಾಮದಲ್ಲಿರುವ ಕೆಂಪೇಗೌಡರ ಸಮಾಧಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಭಾನುವಾರ ಬೆಳಗ್ಗೆ ಪೂಜೆ ಸಲ್ಲಿಸಿದರು
ಕೆಂಪೇಗೌಡರ 512ನೇ ಜಯಂತಿ ನಿಮಿತ್ತ ಕೆಂಪಾಪುರ ಗ್ರಾಮದಲ್ಲಿರುವ ಕೆಂಪೇಗೌಡರ ಸಮಾಧಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಭಾನುವಾರ ಬೆಳಗ್ಗೆ ಪೂಜೆ ಸಲ್ಲಿಸಿದರು    

ಮಾಗಡಿ: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿ ಇರುವ ಮಾಗಡಿ ತಾಲೂಕಿನ ಕೆಂಪಾಪುರ ಜನ ಗ್ರಾಮವನ್ನು ಒಂದು ವರ್ಷದೊಳಗೆ ಸಮಗ್ರವಾಗಿ ಅಭಿವೃದ್ಧಿಪಡಿಸಿ ಮುಂದಿನ ವರ್ಷದ ಜಯಂತಿಯನ್ನು ಇಲ್ಲಿಯೇ ಆಚರಿಸಲಾಗುವುದು ಎಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಕೆಂಪೇಗೌಡರ 512ನೇ ಜಯಂತಿ ನಿಮಿತ್ತ ಕೆಂಪಾಪುರ ಗ್ರಾಮದಲ್ಲಿರುವ ಕೆಂಪೇಗೌಡರ ಸಮಾಧಿಗೆ ಭಾನುವಾರ ಬೆಳಗ್ಗೆ ಪೂಜೆ ಸಲ್ಲಿಸಿ ಮಾಧ್ಯಮಗಳ ಜತೆ ಮಾತನಾಡಿದರು.

ಸಮಸ್ತ ಕನ್ನಡಿಗರ ಪಾಲಿಗೆ ಕೆಂಪಾಪುರವೂ ಒಂದು ಶ್ರದ್ಧಾಕೇಂದ್ರ. ಹೀಗಾಗಿ ಸಮಾಧಿ ಸ್ಥಳ, ಕೆಂಪಾಪುರ ಕೆರೆಯನ್ನು ಅಭಿವೃದ್ಧಿ ಮಾಡಲಾಗುವುದು. ನಾಡಿನ ಮತ್ತು ದೇಶದ ಸಮಸ್ತ ಜನರು ಇಲ್ಲಿಗೆ ಭೇಟಿ ನೀಡುವಂತೆ ಆಗಬೇಕು. ಕೆಂಪೇಗೌಡರ ಕಾಲದ ವೈಭವವನ್ನು ಮರುಸೃಷ್ಠಿ ಮಾಡಿಇಡೀ ಗ್ರಾಮವನ್ನು ಐತಿಹಾಸಿಕವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.

ADVERTISEMENT

ಈಗಾಗಲೇ ಯೋಜನೆ ಜಾರಿ ಹಂತದಲ್ಲಿದ್ದು, ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಯೋಜನೆಯನ್ನು ಕ್ಷಿಪ್ರವಾಗಿ ಮುಗಿಸಲಾಗುವುದು. ಅದಕ್ಕಾಗಿ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಪ್ರತಿಮೆ ಅನಾವರಣ:ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ನಿರ್ಮಾಣ ಆಗುತ್ತಿರುವ ಸೆಂಟ್ರಲ್‌ ಪಾರ್ಕ್‌ನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಲೋಹದ ಪ್ರತಿಮೆಯನ್ನು ಮುಂಬರುವ ಫೆಬ್ರುವರಿ-ಮಾರ್ಚ್‌ನಲ್ಲಿ ಲೋಕಾರ್ಪಣೆ ಮಾಡಲಾಗುವುದು. ಕೋವಿಡ್‌ನಿಂದ ವಿಳಂಬವಾಗಿದ್ದ ಕಾಮಗಾರಿ ಪುನಾ ಭರದಿಂದ ಸಾಗಿದೆ. ನೋಯಿಡಾದಲ್ಲಿ ಪ್ರತಿಮೆ ಸಿದ್ಧವಾಗುತ್ತಿದೆ ಎಂದು ಇದೇ ವೇಳೆ ಡಿಸಿಎಂ ಹೇಳಿದರು.

ಶಾಸಕ ಮಂಜುನಾಥ್‌, ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಸಿಇಒ ಇಕ್ರಂ, ಬಿಜೆಪಿ ಮುಖಂಡ ಎಚ್.‌ಎಂ. ಕೃಷ್ಣಮೂರ್ತಿ, ರಾಮನಗರ ಬಿಜೆಪಿ ಜಿಲ್ಲಾ ಅಧ್ಯಕ್ಷ ಹುಲವಾಡಿ ದೇವರಾಜ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.