
ಕನಕಪುರ: ಚಿಲಂದವಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡಿರುವುದು ಮಂಗಳವಾರ ಪತ್ತೆಯಾಗಿದೆ.
ಸಂಗಮ ಕನಕಪುರ ರಸ್ತೆ ಕುಳಿಕಡದಗ್ಗು ಅರಣ್ಯ ಪ್ರದೇಶದಲ್ಲಿ ಜಿಂಕೆಯನ್ನು ಅಕ್ರಮವಾಗಿ ಬೇಟೆಯಾಡಿ ಅದರ ಮಾಂಸವನ್ನು ಸಾಗಿಸುತ್ತಿದ್ದಾಗ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಉಯ್ಯಂಬಳ್ಳಿ ಹೋಬಳಿ ಬೊಮ್ಮಸಂದ್ರ ಗ್ರಾಮದ ಜಡಿಯಪ್ಪನ ಮಗ ಕುಮಾರ್, ಬಸಪ್ಪನ ಮಗ ಮಾದೇಶ್ ಆರೋಪಿಗಳು.
ಸಹಾಯಕ ಸಂರಕ್ಷಣಾಧಿಕಾರಿ ನಾಗೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಡಿ.ದೇವರಾಜು ನೇತೃತ್ವದಲ್ಲಿ ಅರಣ್ಯ ರಕ್ಷಕರು ದಾಳಿ ನಡೆಸಿದ್ದಾರೆ.
ಅರಣ್ಯ ಗಸ್ಟು ಪಾಲಕರಾದ ಸುಭಾಷ್ ಸಾವಳಗಿ, ಮಂಜುನಾಥ್ ಬಡಿಗೇರ, ಮಲ್ಲಿಕಾರ್ಜುನ್ ಆರ್.ಪೂಜಾರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಆರೋಪಿಗಳಿಂದ ಎಂಟು ಕೆಜಿ ಜಿಂಕೆ ಮಾಂಸ, ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.