ADVERTISEMENT

ವಿವಾಹವಾಗುವುದಾಗಿ ವಂಚನೆ: ಆರೋಪಿಗೆ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 5:05 IST
Last Updated 3 ಆಗಸ್ಟ್ 2021, 5:05 IST

ಹೊಸಕೋಟೆ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿದ್ದ ಆರೋಪಿಗೆ ಪಟ್ಟಣದ ಜೆಎಂಎಫ್‌ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ತಾಲ್ಲೂಕಿನ ನಂದಗುಡಿ ಹೋಬಳಿಯ ಬೀರನಹಳ್ಳಿಯ ಮುನಿರಾಜ್ ಶಿಕ್ಷೆಗೊಳಗಾದವರು.

ಆತ ಅದೇ ಗ್ರಾಮದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ಆಕೆಯ ಜೊತೆಯಲ್ಲಿ ವಾಸಿಸುತ್ತಿದ್ದ. ಆಕೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಇದಾದ ಬಳಿಕ ಆತ, ಆಕೆ ಹಾಗೂ ಹೆಣ್ಣುಮಗುವನ್ನು ಮನೆಯಿಂದ ಹೊರಹಾಕಿ ಬೇರೊಂದು ಮದುವೆಯಾಗಿದ್ದ.

ADVERTISEMENT

ಈ ಸಂಬಂಧ ಮುನಿರಾಜು ವಿರುದ್ಧ 2008ರಲ್ಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಆರ್‌.ಬಿ. ಗಿರೀಶ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು
ನೀಡಿದ್ದಾರೆ.

ಮುನಿರಾಜ್‌ಗೆ ಐಪಿಸಿ ಕಲಂ 417ರ ಅಪರಾಧಕ್ಕಾಗಿ 6 ತಿಂಗಳ ಜೈಲು ಸಜೆ ಹಾಗೂ ₹ 5 ಸಾವಿರ ದಂಡ, ಐಪಿಸಿ ಕಲಂ 420ರ ಅಪರಾಧಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹ 5 ಸಾವಿರ ದಂಡ ವಿಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.