ದೊಡ್ಡಬಳ್ಳಾಪುರ:‘ಸರ್ಕಾರದ ಮಾರ್ಗ ಸೂಚಿಗಳಂತೆ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪದವಿ ತರಗತಿಗಳನ್ನು ನಿಯಮಾನುಸಾರ ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಕೋವಿಡ್-19 ನಿಯಮಗಳನ್ನು ಪಾಲಿಸುವ ಮೂಲಕ ತಮ್ಮ ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಶ್ರೀನಿವಾಸಯ್ಯ ಹೇಳಿದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪದವಿ ತರಗತಿಗಳ ಆರಂಭದ ಅಂಗವಾಗಿ ಮಂಗಳವಾರ ಜಾಗೃತಿ ಮತ್ತು ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು.
ನಗರಸಭೆ ವತಿಯಿಂದ ಕಾಲೇಜಿನ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಕಾಲೇಜಿನ ಹಳೆಯ ವಿದ್ಯಾರ್ಥಿ ಮಂಜೇಶ್ ವಿದ್ಯಾರ್ಥಿಗಳಿಗೆ 600 ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿದ್ದಾರೆ. ವ್ಯಕ್ತಿಗತ ಅಂತರಕ್ಕೆ ಒತ್ತು ನೀಡಲಾಗುತ್ತಿದೆ. 1ನೇ, 3ನೇ ಹಾಗೂ 5ನೇ ಸೆಮಿಸ್ಟರ್ಗಳ ಆನ್ಲೈನ್ ತರಗತಿಗಳು ಆರಂಭವಾಗಿವೆ.
ಸೆ. 14ರಿಂದ ಅಂತಿಮಪದವಿ ತರಗತಿಗಳ ಪರೀಕ್ಷೆ ನಡೆಯುವುದರಿಂದ ವಿದ್ಯಾರ್ಥಿಗಳು ಅಂತರ ಕಾಯ್ದುಕೊಂಡು ಪುನರಾವರ್ತಿತ ತರಗತಿಗಳನ್ನುನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಮೊಬೈಲ್ಗೆ ಗ್ರೂಪ್ ಮಾಡಿ,ಪ್ರತಿ ವಿಚಾರಗಳನ್ನು ತಿಳಿಸಲಾಗುತ್ತದೆ. ಆನ್ಲೈನ್ ಕ್ಲಾಸ್ಗಳನ್ನು ವಿದ್ಯಾರ್ಥಿಗಳು ನಿರ್ಲಕ್ಷಿಸಬಾರದು’ ಎಂದರು.
ಇದೇ ವೇಳೆ ಕಾಲೇಜಿನ ಪ್ರಾಧ್ಯಾಪಕರಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ನೀಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.