ADVERTISEMENT

ರಾಜಕೀಯ ವೈಷಮ್ಯಕ್ಕೆ ಟೊಮೊಟೊ ಬೆಳೆ ನಾಶ

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 7:40 IST
Last Updated 5 ಜನವರಿ 2021, 7:40 IST
ಹಾಳಾಗಿರುವ ಟೊಮೊಟೊ ಬೆಳೆ
ಹಾಳಾಗಿರುವ ಟೊಮೊಟೊ ಬೆಳೆ   

ದೊಡ್ಡಬಳ್ಳಾಪುರ: ರಾಜಕೀಯ ವೈಷಮ್ಯಕ್ಕೆ ತಾಲ್ಲೂಕಿನ ಕುರುವಿಗೆರೆ ಗ್ರಾಮದಲ್ಲಿ ಅಶ್ವತ್ಥ್ ನಾರಾಯಣ್ ಎಂಬುವವರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಟೊಮೊಟೊ ಬೆಳೆ ರಾತ್ರೋರಾತ್ರಿ ದುಷ್ಕರ್ಮಿಗಳು ಹಾಳು ಮಾಡಿದ್ದಾರೆ.

ಟೊಮೊಟೊ ಫಸಲಿಗೆ ಬಂದಿದ್ದು ಮಾರುಕಟ್ಟೆಗೆ ಸಾಗಿಸುವ ಸಿದ್ಧತೆಯಲ್ಲಿದ್ದರು. ಭಾನುವಾರ ರಾತ್ರಿ ಟೊಮೊಟೊ ತೋಟಕ್ಕೆ ನುಗ್ಗಿರುವ ದುಷ್ಕರ್ಮಿಗಳು ಗಿಡಗಳು ಕತ್ತರಿಸಿ ಹಾಕಿದ್ದಾರೆ ಎಂದು ರೈತ ಅಶ್ವತ್ಥ್‌ನಾರಾಯಣ್ ಅಳಲು ತೊಡಿಕೊಂಡಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ ರಾಜಕೀಯ ವೈಷಮ್ಯದಿಂದ ಬೆಳೆ ನಾಶ ಮಾಡಲಾಗಿದೆ ಎಂದು ಆರೋಪಿಸಿ ರೈತ ಅಶ್ವತ್ಥ್‌ನಾರಾಯಣ್‌ ಕೆಲ ಶಂಕಿತರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.