ADVERTISEMENT

ಕೈದಿ ಬಂಧನ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 2:00 IST
Last Updated 18 ನವೆಂಬರ್ 2020, 2:00 IST
ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸರು ಪೆರೋಲ್ ಮೇಲೆ ಬಂದು ತಲೆಮರೆಸಿಕೊಂಡಿದ್ದ ಕೈದಿಯೊಬ್ಬರನ್ನು ಬಂಧಿಸಿದ್ದಾರೆ
ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸರು ಪೆರೋಲ್ ಮೇಲೆ ಬಂದು ತಲೆಮರೆಸಿಕೊಂಡಿದ್ದ ಕೈದಿಯೊಬ್ಬರನ್ನು ಬಂಧಿಸಿದ್ದಾರೆ   

ಆನೇಕಲ್ : ಪೆರೋಲ್‌ ಮೇಲೆ ಬಿಡುಗಡೆಯಾಗಿ ಅವಧಿ ಮುಗಿದ ನಂತರ ಜೈಲಿಗೆ ಹೋಗದೆ ತಲೆ ಮರೆಸಿಕೊಂಡಿದ್ದ ಕೈದಿಯೊಬ್ಬರನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಕೈದಿಯನ್ನು ಅಡವಯ್ಯ ಉರುಫ್‌ ಸ್ವಾಮಿ ಕುಂಬಯ್ಯ ಎಂದು ಗುರುತಿಸಲಾಗಿದೆ. ಕೈದಿ ಮೂಲತಃ ಬೆಳಗಾವಿ ಜಿಲ್ಲೆ ಮಾರಿಹಾಳ ಗ್ರಾಮದವರು. ಕೊಲೆ ಆರೋಪದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಗೋವಾ ರಾಜ್ಯದ ಕೊಲವಳೆ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಪೆರೋಲ್‌ ರಜೆ ಮುಕ್ತಾಯವಾದರೂ ಜೈಲಿಗೆ ತೆರಳದೆ ಜಿಗಣಿಯಲ್ಲಿ ತಲೆಮರೆಸಿಕೊಂಡಿದ್ದರು. ಬೆಳಗಾವಿ ಪೊಲೀಸರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಕೈದಿಯನ್ನು ಪತ್ತೆ ಹಚ್ಚಿ ಬೆಳಗಾವಿ ಪೊಲೀಸರ ವಶಕ್ಕೆ ನೀಡಿದ್ದಾರೆ ಎಂದು ಜಿಗಣಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಕೆ.ವಿಶ್ವನಾಥ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT