
ಪ್ರಜಾವಾಣಿ ವಾರ್ತೆ
ವಿಜಯಪುರ (ದೇವನಹಳ್ಳಿ): ಪಟ್ಟಣದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕೆ.ನಾಗರಾಜ್ ಅವರನ್ನು ಕರ್ನಾಟಕ ರಾಜ್ಯ ತಿಗಳರ (ವಹ್ನಿಕುಲ ಕ್ಷತ್ರಿಯ) ಸಂಘದಿಂದ ಸನ್ಮಾನಿಸಲಾಯಿತು.
ಸಂಘದ ಸಂಘಟನಾ ಕಾರ್ಯದರ್ಶಿ ಜೆ.ಆರ್.ಮುನಿವೀರಣ್ಣ, ರಾಜ್ಯ ಸಂಘದ ನಿರ್ದೇಶಕ ಎನ್.ಕನಕರಾಜು, ಧರ್ಮರಾಯ ಸ್ವಾಮಿ ದೇವಾಲಯದ ಖಜಾಂಚಿ ತರಕಾರಿ ರಮೇಶ್, ಪುರಸಭಾ ಮಾಜಿ ಸದಸ್ಯ ಆರ್.ಮುನಿಕೃಷ್ಣಪ್ಪ, ಎನ್.ಸಿ.ಮುನಿವೆಂಕಟರಮಣ, ತಾಲ್ಲೂಕು ತಿಗಳರ ಸಂಘದ ನಿರ್ದೇಶಕ ಎನ್.ಅಂಜಿನಪ್ಪ, ಕೆ.ರಮೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.