ದೇವನಹಳ್ಳಿ: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡ ಬುಧವಾರ ದಾಳಿ ನಡೆಸಿ, ಕೋಪ್ಟಾ ಕಾಯಿದೆ ಉಲ್ಲಂಘಿಸಿದ ಮಳಿಗೆಗಳ ಮೇಲೆ ಪ್ರಕರಣ ದಾಖಿಸಿ, ₹4,200 ದಂಡ ವಸೂಲಿ ಮಾಡಿದ್ದಾರೆ.
ಕೋಪ್ಟಾ-2023 ಕಾಯಿದೆಯ ಸೆಕ್ಷನ್ 4ರ ಅಡಿಯಲ್ಲಿ ಒಟ್ಟು 17 ಪ್ರಕರಣ ದಾಖಲಿಸಲಾಗಿದೆ.
ಎನ್ಟಿಸಿಪಿ ಉಪ ನಿರ್ದೇಶಕ ಡಾ.ರಜನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮುರುಳಿ ಮೋಹನ್, ಡಾ.ಶ್ರೀದೇವಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ.ವಿದ್ಯಾ ರಾಣಿ ಪಿ.ಎಸ್, ದೇವನಹಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ಪೊಲೀಸ್ ಇಲಾಖೆ ಸಿಬ್ಬಂದಿ ಪ್ರಭಾಕರ್, ಜೇಲ್ ಥೋಮಸ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.