ADVERTISEMENT

ದೇವನಹಳ್ಳಿ ತಾ.ಪಂ: ಅಧ್ಯಕ್ಷೆಯಾಗಿ ಶಶಿಕಲಾ ಆನಂದ್ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 12:47 IST
Last Updated 16 ಜೂನ್ 2020, 12:47 IST
ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಶಶಿಕಲಾಆನಂದ್ ಅವರನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು
ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಶಶಿಕಲಾಆನಂದ್ ಅವರನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು   

ದೇವನಹಳ್ಳಿ/ವಿಜಯಪುರ: ಚೈತ್ರಾ ವೀರೇಗೌಡ ರಾಜೀನಾಮೆಯಿಂದ ತೆರವಾಗಿದ್ದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಯಲಿಯೂರು ಕ್ಷೇತ್ರದ ಸದಸ್ಯೆ ಶಶಿಕಲಾ ಆನಂದ್ಅವಿರೋಧ ಆಯ್ಕೆಯಾಗಿದ್ದಾರೆ.

ಶಶಿಕಲಾ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಆಯ್ಕೆಯನ್ನು ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಘೋಷಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ತಹಶೀಲ್ದಾರ್ ಅಜಿತ್ ಕುಮಾರ್ ರೈ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ವಸಂತ್ ಕುಮಾರ್, ತಹಶೀಲ್ದಾರ್ ರಾಜು ಪಾಲ್ಗೊಂಡಿದ್ದರು.

ADVERTISEMENT

ಅಧ್ಯಕ್ಷೆಯಾಗಿ ಆಯ್ಕೆಯಾದ ಶಶಿಕಲಾ ಆನಂದ್ ಮಾತನಾಡಿ, ಸಿಕ್ಕಿರುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡು ತಾಲ್ಲೂಕಿನಲ್ಲಿನ ಎಲ್ಲಾ ಗ್ರಾಮ ಪಂಚಾಯಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಕೆಪಿಸಿಸಿ ಸದಸ್ಯ ಎ.ಸಿ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಭಾರತಿ ಲಕ್ಷ್ಮಣಗೌಡ, ದಿನ್ನೂರು ವೆಂಕಟೇಶ್, ಜಗನ್ನಾಥ್, ಲಕ್ಷ್ನಣಗೌಡ, ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಶ್ರೀನಿವಾಸಗೌಡ, ಚನ್ನಹಳ್ಳಿ ರಾಜಣ್ಣ, ಎಸ್.ಪಿ.ಮುನಿರಾಜು, ಶಾಂತಕುಮಾರ್, ಹಳಿಯೂರು ರಘುಪತಿ, ಯುವ ಘಟಕದ ಜಿಲ್ಲಾಧ್ಯಕ್ಷ ನಾಗೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.