ADVERTISEMENT

ಭಕ್ತರಿಗೆ ಕೋಸಂಬರಿ, ಪಾನಕ, ಮಜ್ಜಿಗೆ ವಿತರಣೆ

ಶ್ರೀರಾಮನ ಆದರ್ಶ ಗುಣಗಳನ್ನು ಪಾಲನೆ ಮಾಡಿಕೊಂಡು ಹೋಗಲು ಸಲಹೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2019, 13:25 IST
Last Updated 13 ಏಪ್ರಿಲ್ 2019, 13:25 IST
05 : ವಿಜಯಪುರದ ಆನೆಛತ್ರದ ಉತ್ತರಮುಖಿ ಕಾರ್ಯಸಿದ್ಧಿ ಭಕ್ತಾಂಜನೇಯಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು
05 : ವಿಜಯಪುರದ ಆನೆಛತ್ರದ ಉತ್ತರಮುಖಿ ಕಾರ್ಯಸಿದ್ಧಿ ಭಕ್ತಾಂಜನೇಯಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು   

ವಿಜಯಪುರ: ಶ್ರೀರಾಮನವಮಿಯ ಅಂಗವಾಗಿ ಎಲ್ಲೆಡೆ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ಶುಕ್ರವಾರದಿಂದಲೇ ದೇವಾಲಯಗಳನ್ನು ಸ್ವಚ್ಛಗೊಳಿಸಿದ್ದ ಭಕ್ತರು, ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಿ, ಮಾವಿನ ಎಲೆಗಳು, ಬೇವಿನ ಹೂಗಳಿಂದ ತೋರಣಗಳನ್ನು ಕಟ್ಟಿ ಪೂಜೆ ಸಲ್ಲಿಸಿದರು. ದೇವರ ಮೂರ್ತಿಗಳಿಗೆ ಹೂವಿನ ವಿಶೇಷ ಅಲಂಕಾರ ಮಾಡಿ, ದೇವಾಲಯಗಳಿಗೆ ಬಂದಿದ್ದ ಭಕ್ತರಿಗೆ ಕೋಸಂಬರಿ, ಪಾನಕ, ಮಜ್ಜಿಗೆಗಳನ್ನು ವಿತರಣೆ ಮಾಡಿದರು.

ಇಲ್ಲಿನ ಆನೆಛತ್ರದ ಉತ್ತರಮುಖಿ ಕಾರ್ಯಸಿದ್ಧಿ ಭಕ್ತಾಂಜನೇಯಸ್ವಾಮಿ ದೇವಾಲಯ, ಚನ್ನರಾಯಪಟ್ಟಣ ಹೋಬಳಿ ಐಬಸಾಪುರದ ಅಭಯ ಆಂಜನೇಯಸ್ವಾಮಿ ದೇವಾಲಯ, ಶಿಡ್ಲಘಟ್ಟ ಕ್ರಾಸ್, ದೇವನಹಳ್ಳಿ ರಸ್ತೆಯಲ್ಲಿರುವ ಹನುಮಾನ್ ದೇವಾಲಯ, ಭಟ್ರೇನಹಳ್ಳಿ ರಸ್ತೆಯಲ್ಲಿರುವ ಆಂಜನೇಯ ದೇವಾಲಯಗಳಲ್ಲಿ ಪೂಜೆ ನೆರವೇರಿಸಲಾಯಿತು.

ADVERTISEMENT

ನಗರದ ಗುರಪ್ಪನಮಠದ ಮೂಡಲ ಆಂಜನೇಯಸ್ವಾಮಿ ಚನ್ನರಾಯಪಟ್ಟಣ ಸರ್ಕಲ್, ಸ್ವಾನ್ ಸಿಲ್ಕ್ ಕಾರ್ಖಾನೆ ಸರ್ಕಲ್ ಸೇರಿದಂತೆ ಪ್ರತಿಯೊಂದು ಹಳ್ಳಿಯಲ್ಲೂ ಆಂಜನೇಯಸ್ವಾಮಿ ದೇವಾಲಯಗಳು, ಶ್ರೀರಾಮ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು.

ಧಾರ್ಮಿಕ ಮುಖಂಡ ಅಶ್ವಥಪ್ಪ ಮಾತನಾಡಿ, ಹಬ್ಬಗಳ ಆಚರಣೆಗಳ ಮಾಡುವುದು ಹೆಚ್ಚಲ್ಲ. ಶ್ರೀರಾಮನ ಆದರ್ಶ ಗುಣಗಳನ್ನು ಪಾಲನೆ ಮಾಡಿಕೊಂಡು ಹೋಗಬೇಕು. ಮಾನವೀಯ ಸಂಬಂಧಗಳು ಗಟ್ಟಿಗೊಳ್ಳಬೇಕು, ಆದರ್ಶ ಪತಿ, ಆದರ್ಶ ಪತ್ನಿ ಸಹೋದರ ಪ್ರೀತಿ, ಪಿತೃವಾಕ್ಯ ಪರಿಪಾಲನೆಯಂತಹ ಮಹತ್ವದ ಗುಣಗಳನ್ನು ಕಲಿಸಿದ ಶ್ರೀರಾಮ ಈಗಿನ ಸಮಾಜಕ್ಕೆ ಆದರ್ಶವಾಗಬೇಕು. ಶ್ರೀರಾಮನ ಆದರ್ಶಗಳನ್ನು ಇಂದಿನ ಯುವಪೀಳಿಗೆಗೆ ತಿಳಿಸಬೇಕಾಗಿದೆ. ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ದೇವಾಲಯಕ್ಕೆ ಬಂದಿದ್ದ ಭಕ್ತರಿಗೆ ಪ್ರಸಾದ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.