ಆನೇಕಲ್: ‘ಬಡವರ ಮತ್ತು ಸಂಕಷ್ಟದಲ್ಲಿರುವವರ ಸೇವೆ ಮಾಡುವುದು ನಮ್ಮ ಧ್ಯೇಯವಾಗಿದೆ. ಹಲವು ವರ್ಷಗಳಿಂದಲೂ ಈ ಕಾರ್ಯದಲ್ಲಿ ರಾಮಕೃಷ್ಣಾಶ್ರಮ ನಿರತವಾಗಿದೆ’ ಎಂದು ಶಿವನಹಳ್ಳಿ ರಾಮಕೃಷ್ಣ ಆಶ್ರಮದ ಸ್ವಾಮಿ ವಿಷ್ಣುಮಯಾನಂದ ಜೀ ಹೇಳಿದರು.
ತಾಲ್ಲೂಕಿನ ಬನ್ನೇರುಘಟ್ಟದಲ್ಲಿ ಬಡ ಕುಟುಂಬಗಳಿಗೆ ಮತ್ತು ಕೊರೊನಾ ವಾರಿಯರ್ಸ್ಗೆ ಆಹಾರದ ಕಿಟ್ಗಳನ್ನು ವಿತರಿಸಿ ಮಾತನಾಡಿದರು.
ಕೊರೊನಾ ಸಂದರ್ಭದಲ್ಲಿ ಆಹಾರದ ಕಿಟ್ಗಳನ್ನು ನೀಡುವ ಮೂಲಕ ಸಂಕಷ್ಟದಲ್ಲಿರುವವರಿಗೆ ನೆರವಾಗಬೇಕೆಂಬ ಉದ್ದೇಶದಿಂದ ಈ ಕಾರ್ಯ ಕೈಗೊಳ್ಳಲಾಗಿದೆ. ಆಶ್ರಮದೊಂದಿಗೆ ಇನ್ಫೊಸಿಸ್ ಪ್ರತಿಷ್ಠಾನ ಕೈಜೋಡಿಸಿರುವುದರಿಂದ ಹೆಚ್ಚು ಜನರಿಗೆ ಸೌಲಭ್ಯ ನೀಡಲು ಸಾಧ್ಯವಾಗಿದೆ. ಅರ್ಹರನ್ನು ಗುರುತಿಸುವ ನಿಟ್ಟಿನಲ್ಲಿ ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಗುರುತಿಸಿದ್ದಾರೆ. ಡಿವೈಎಸ್ಪಿ ಡಾ.ಎಚ್.ಎಂ.ಮಹದೇವಪ್ಪ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ, ಜಿಗಣಿ, ಚಂದಾಪುರ, ಅತ್ತಿಬೆಲೆಗಳಲ್ಲಿ ಪೊಲೀಸರ ಸಹಕಾರದಿಂದ ಕಿಟ್ಗಳನ್ನು ವಿತರಿಸಲಾಗಿದೆ ಎಂದರು.
ಡಿವೈಎಸ್ಪಿ ಡಾ.ಎಚ್.ಎಂ.ಮಹದೇವಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಕೃಷ್ಣ, ಸಬ್ ಇನ್ಸ್ಪೆಕ್ಟರ್ ಬಿ.ಟಿ.ಗೋವಿಂದ್
ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.