ಸಾಂದರ್ಭಿಕ ಚಿತ್ರ
ಪ್ರಜಾವಾಣಿ ಚಿತ್ರ
ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ಸಮೀಪದ 66/11ಕಿ.ವಿ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕೆಲಸ ಇರುವುದರಿಂದ ನ.18 ರಂದು ಬೆಳಗ್ಗೆ 10 ಗಂಟೆ ಇಂದ ಸಂಜೆ 6 ಗಂಟೆವರೆಗೆ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ನಗರ ಉಪವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎಚ್.ಕೆ.ವಿನಯಕುಮಾರ್ ತಿಳಿಸಿದ್ದಾರೆ.
ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುವ ಪ್ರದೇಶ: ನಗರದ ಡಿ.ಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಚೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್ ಘಟ್ಟ, ಕೋಳೂರು, ಕಂಟನಕುಂಟೆ.
ಅಳ್ಳಾಲಸಂದ್ರ, ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ರಾಮಯ್ಯನಪಾಳ್ಯ, ತೊಗರಿಘಟ್ಟ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಕೋಡಿಹಳ್ಳಿ, ಲಿಂಗನಹಳ್ಳಿ, ಕಮಲೂರು,ನೆಲ್ಲುಕುಂಟೆ. ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ,ನೇರಳೆಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಷ್ಟೂರು ಮತ್ತು ಸುತ್ತಮುತ್ತಲಿನ ಪ್ರದೇಶ.
ಘಾಟಿಯಲ್ಲಿ ಲಕ್ಷ ದೀಪೋತ್ಸವ ನಾಳೆ
ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ನ.19 ರಂದು ಸಂಜೆ 6 ಗಂಟೆಗೆ ಕಾರ್ತಿಕ ಅಮಾವಾಸ್ಯೆ ದಿವಸ ಪ್ರತಿವರ್ಷದಂತೆ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ಹಾಗೂ ಲಕ್ಷ ದೀಪೋತ್ಸವ ನಡೆಯಲಿದೆ.
ಸಂಜೆ ಲಕ್ಷ ದೀಪೋತ್ಸವದಲ್ಲಿ ಭಾಗವಹಿಸುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಇರಲಿದೆ ಎಂದು ದೇವಾಲಯದ ಕಾರ್ಯದರ್ಶಿ ಹಾಗೂ ಉಪ ಆಯುಕ್ತ ಪಿ.ದಿನೇಶ್, ಪ್ರಧಾನ ಅರ್ಚಕ ಶ್ರೀನಿಧಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.