ದೊಡ್ಡಬಳ್ಳಾಪುರ: ನಗರ ಪೊಲೀಸ್ ಠಾಣೆಗೆ ಕೂಗಳತೆ ದೂರದಲ್ಲಿರುವ ಡಿ.ಕ್ರಾಸ್ ಹಾಗೂ ಅಯ್ಯಪ್ಪಸ್ವಾಮಿ ದೇವಾಲಯ ರಸ್ತೆಯ ಅಂಗಡಿಗಳಲ್ಲಿ ಶುಕ್ರವಾರ ರಾತ್ರಿ ಕಳ್ಳತನ ನಡೆದಿದೆ.
ಫರ್ನೀಚರ್ ಹಾಗೂ ಟೈಲ್ಸ್ ಅಂಗಡಿಗೆ ಅಳವಡಿಸಿದ್ದ ಕಬ್ಬಿಣದ ಶೀಟುಗಳನ್ನು ಕೊಯ್ದಿರುವ ದುಷ್ಕರ್ಮಿಗಳು ಅಂಗಡಿಯಲ್ಲಿ ಹಣ ದೋಚಲು ಯತ್ನಿಸಿದ್ದಾರೆ. ಆದರೆ ಅಂಗಡಿಯಲ್ಲಿ ಹಣ ಸಿಗದೆ ಇದ್ದ ಕಾರಣ ಎರಡು ಅಂಗಡಿಗಳಲ್ಲಿ ತಲಾ ₹50 ಸಾವಿರಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ಹಾಳು ಮಾಡಿ ಪರಾರಿಯಾಗಿದ್ದಾರೆ.
ಈ ಭಾಗದ ಅಂಗಡಿಗಳಲ್ಲಿ ಸತತ ಐದನೇ ಬಾರಿಗೆ ಕಳ್ಳತನ ನಡೆದಿದೆ. ಆದರೆ ಕಳ್ಳರು ಮಾತ್ರ ಇದುವರೆಗೂ ಪತ್ತೆಯಾಗಿಲ್ಲ. ಇದರಿಂದ ನಿರ್ಭೀತಿಯಿಂದ ವ್ಯಾಪಾರ ವಹಿವಾಟು ನಡೆಸಲು ಕಷ್ಟವಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಂಗಡಿಗಳ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.