ADVERTISEMENT

ದೊಡ್ಡಬಳ್ಳಾಪುರ: ತಾಲ್ಲೂಕಿನ ಗುಮ್ಮನಹಳ್ಳಿ ಸಮೀಪ ರಸ್ತೆ ಅಪಘಾತ; ಮಹಿಳೆ ಸಾವು

ಆ್ಯಂಬುಲೆನ್ಸ್ ಸಿಗದೆ ಗಾಯಾಳುಗಳ ಪರದಾಟ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 3:09 IST
Last Updated 22 ಸೆಪ್ಟೆಂಬರ್ 2025, 3:09 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಯುವಕರು ಸಾಸಲು ಆಸ್ಪತ್ರೆ ಬಾಗಿಲಿಗೆ ಬೇಲಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು
ದೊಡ್ಡಬಳ್ಳಾಪುರ ತಾಲ್ಲೂಕಿನ ಯುವಕರು ಸಾಸಲು ಆಸ್ಪತ್ರೆ ಬಾಗಿಲಿಗೆ ಬೇಲಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು   

ದೊಡ್ಡಬಳ್ಳಾಪುರ: ತಾಲ್ಲೂಕಿನ ಗುಮ್ಮನಹಳ್ಳಿ ಸಮೀಪ ಭಾನುವಾರ ಸಂಜೆ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿಯಾಗಿ ಡಿಕ್ಕಿಯಾಗಿ, ಒಬ್ಬ ಮಹಿಳೆ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಲ್ಲೂಕಿನ ಗುಮ್ಮನಹಳ್ಳಿ–ಲಿಂಗಧೀರನಹಳ್ಳಿ ಗೇಟ್ ನಡುವಿನ ತಿರುವಿನಲ್ಲಿ ಸ್ಕೂಟರ್ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೈಲಜಾ(42) ಮತ್ತು ನವೀನ್ ಕುಮಾರ್(19) ಸೇರಿ ನಾಲ್ವರು ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯಲು ವಿಳಂಬವಾಗಿದ್ದರಿಂದಾಗಿ ಶೈಲಜಾ ಅವರು ಮೃತಪಟ್ಟಿದ್ದಾರೆ. 

ಶೈಲಜಾ ಮತ್ತು ನವೀನ್ ಕುಮಾರ್ ಅವರು ಮಧುಗಿರಿ ತಾಲ್ಲೂಕಿನ ಬಿಜವಾರ ಗ್ರಾಮದ ತಾಯಿ, ಮಗ ಎನ್ನಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.