ವಿಜಯಪುರ: ನವದೆಹಲಿಯಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ ಈಚೆಗೆ ನಡೆದ 34ನೇ ರಾಷ್ಟ್ರೀಯ ದಲಿತ ಬರಹಗಾರರ ಸಮ್ಮೇಳನದಲ್ಲಿ ವಿಜಯಪುರದ ಕರ್ನಾಟಕ ಕನ್ನಡ ಅಭಿಮಾನಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಕನ್ನಡ ಆಂಜಿನಪ್ಪ ಅವರಿಗೆ ರಾಷ್ಟ್ರೀಯ ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ಆವಾರ್ಡ್–2018 ನೀಡಿ ಗೌರವಿಸಲಾಯಿತು.
ದೇಶದಲ್ಲಿನ ಬಹುದೊಡ್ಡ ಶಕ್ತಿಯಾಗಿರುವ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ತರುವುದೇ ಸಂಘಟನೆ ಮೂಲ ಉದ್ದೇಶವಾಗಿದೆ. ಸಮಾಜದಲ್ಲಿನ ಎಲ್ಲಾ ಜಾತಿ ವರ್ಗದವರಿಗೆ ಸೌಲಭ್ಯ ಸಿಗಬೇಕು ಎನ್ನುವುದೇ ಅಂಬೇಡ್ಕರ್ ಅವರ ಸಾಮಾಜಿಕ ಆಶಯವಾಗಿತ್ತು. ಈ ನಿಟ್ಟಿನಲ್ಲಿ ಸಂಘಟನೆ ಸಾಗಿದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಕಾರ್ಯದರ್ಶಿ ಜಾಯ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.