ದೊಡ್ಡಬಳ್ಳಾಪುರ:ಕಿಸಾನ್ ಸಮ್ಮಾನ್ ನಿಧಿಯಡಿ ಆರ್ಥಿಕ ನೆರವು ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯ. ಆದರೆ, ರೈತರ ನಿರುತ್ಸಾಹ ಹಾಗೂ ಸರ್ವರ್ ದೋಷದಿಂದ ಅಧಿಕಾರಿಗಳು ಪರದಾಡುವಂತಾಗಿದೆ.
ಸತತ ಪ್ರಚಾರ ನೀಡಿದರೂ ಇ-ಕೆವೈಸಿ ಮಾಡಿಸಲು ರೈತರು ಉತ್ಸಾಹ ತೋರದೆ ದಿನಾಂಕವನ್ನು ವಿಸ್ತರಿಸಲಾಗಿದೆ. ಅಲ್ಲದೇ, ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಶನಿವಾರ ಮತ್ತು ಭಾನುವಾರ ಇ-ಕೆವೈಸಿ ನೋಂದಾಯಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯ ನಿರ್ವಹಿಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ಕೆಲವು ರೈತರ ಆಧಾರ್ಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿಲ್ಲ. ಮತ್ತೊಂದೆಡೆ ಇ-ಕೆವೈಸಿ ದೋಷದಿಂದ ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ.
ಯೋಜನೆಯ ಪ್ರತಿ ಫಲಾನುಭವಿಯು ಆ. 31ರ ಒಳಗಾಗಿ ಇ-ಕೆವೈಸಿ ಮಾಡಿಸಬೇಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.