ದೇವನಹಳ್ಳಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಲ್ಯಾಣ ಇಲಾಖೆ ಗ್ರಾಮಾಂತರ ಜಿಲ್ಲೆ ವತಿಯಿಂದ ಕೆ.ವಿ.ಟಿ ಮತ್ತು ಎಸ್.ಡಿ.ಸಿ.ಎಲ್ ಸಂಸ್ಥೆಯು ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ತರಬೇತಿ ನೀಡಲು ಅರ್ಹರಿಂದ ನೋಂದಣಿಗಾಗಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 33ರಿಂದ 50ವಯಸ್ಸಿನ ಮಾಜಿ ಸೈನಿಕರು(ಜೈ ಕೌಶಲ್ಯ ಜವಾನ್) ಮತ್ತು 18ರಿಂದ 50ವಯಸ್ಸಿನ ವೀರನಾರಿಯರು ಹಾಗೂ ಮಾಜಿ ಸೈನಿಕರ ವಿಧವೆಯರು ವೆಬ್ಸೈಟ್ನಲ್ಲಿ ನೋಂದಣಿ ಮಾಡಬಹುದಾಗಿದೆ. ನೋಂದಾಯಿಸಲು ಯಾವುದೇ ಶುಲ್ಕವಿರುವುದಿಲ್ಲ.
ಮಾಹಿತಿಗಾಗಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಲ್ಯಾಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ರಸ್ತೆ, ಬೆಂಗಳೂರು- 560025 ದೂ.ಸ. 08025588718 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.