ದೊಡ್ಡಬಳ್ಳಾಪುರ: ಇಂಡಿಯನ್ ನ್ಯಾಷನಲ್ ಟ್ರೇಡ್ ಯುನಿಯನ್ ಕಾಂಗ್ರೆಸ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೆಳೇಕೋಟೆ ಎನ್. ಆಂಜಿನಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಐಎನ್ಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎಂ. ಮುದ್ದಪ್ಪ ಅವರು ನೂತನ ಪ್ರಧಾನ ಕಾರ್ಯದರ್ಶಿಗೆ ಆದೇಶ ಪತ್ರ
ನೀಡಿದರು. ಬಳಿಕ ಮಾತನಾಡಿದ ಅವರು, ‘ಸಂವಿಧಾನದ ಅಡಿಯಲ್ಲಿ ಕಾರ್ಮಿಕರ ಏಳಿಗೆಗೆ ದುಡಿಯಬೇಕು. ಈ ಮೂಲಕ ವ್ಯಾಪ್ತಿಯ ಪ್ರತಿ ಗ್ರಾಮದಲ್ಲೂ ಸಂಘಟನೆಯನ್ನು ಬಲಗೊಳಿಸುವ ಮೂಲಕ ಪಕ್ಷವನ್ನು ಸಮರ್ಥವಾಗಿ ಕಟ್ಟುವಲ್ಲಿ ಸಕ್ರಿಯರಾಗಬೇಕು’ ಎಂದು ಸಲಹೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಕುಮಾರ್, ತೂಬಗೆರೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಿ.ಎನ್. ರಂಗಪ್ಪ, ಹೋಬಳಿ ಘಟಕದ ಅಧ್ಯಕ್ಷ ಶ್ರೀಧರ್, ಹನುಮಂತರಾಯಪ್ಪ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.