ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರದ ಮಾಕಳಿ ಬೆಟ್ಟಕ್ಕೆ ಕೀಡಿಗೇಡಿಗಳು ಬೆಂಕಿ ಹಾಕಿದ್ದು ಶನಿವಾರ ಸಂಜೆಯಿಂದ ಭಾನುವಾರ ಬೆಳಿಗ್ಗೆವರೆಗೂ ಹೊತ್ತಿ ಉರಿದಿದೆ.
ಬೆಟ್ಟದಲ್ಲಿ ಬೆಳೆದು ನಿಂತಿದ್ದ ಸಸ್ಯ ಸಂಪತ್ತು ಮತ್ತು ಪ್ರಾಣಿ, ಪಕ್ಷಿಗಳು ಸುಟ್ಟು ಭಸ್ಮವಾಗಿವೆ. ಹಸಿರಿನಿಂದ ಕಂಗೊಳಿಸುತ್ತಿದ್ದ ಬೆಟ್ಟ ಈಗ ಬೂದಿಯಿಂದ ಆವರಿಸಿದೆ.
ಬೆಟ್ಟದ ತಪ್ಪಲಿನಲ್ಲಿ ಕೃಷಿ ಭೂಮಿ ಹಸನು ಮಾಡಿಕೊಳ್ಳುವ ಉದ್ದೇಶದಿಂದ ಬೆಟ್ಟದ ತಪ್ಪಲಿನಲ್ಲಿ ಪದೇ ಪದೇ ಬೆಂಕಿ ಹಚ್ಚಲಾಗುತ್ತಿದೆ. ಗಾಳಿಯಿಂದ ಬೆಂಕಿ ಇಡೀ ಬೆಟ್ಟವನ್ನೇ ಆವರಿಸಿಕೊಳ್ಳುತ್ತಿದೆ. ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರೂ ಅಗ್ನಿಶಾಮಕ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.