ಸೂಲಿಬೆಲೆ: ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ಮತ್ತು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಖಾಲಿ ನಿವೇಶನ ಹಾಗೂ ಜಮೀನುಗಳಲ್ಲಿ ರಾಶಿ ಹಾಕಿ ಸುಡುವುದು ಸಾಮಾನ್ಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸೂಲಿಬೆಲೆ-ಗಿಡ್ಡಪ್ಪನಹಳ್ಳಿ ರಸ್ತೆಯ ಬದಿಯಲ್ಲಿರುವ ಖಾಲಿ ಮೈದಾನದಲ್ಲಿ ಪ್ಲಾಸ್ಟಿಕ್, ಕಸದ ತ್ಯಾಜ್ಯವನ್ನು ಸುರಿದು ಸುಡುತ್ತಿದ್ದಾರೆ. ಕಲುಷಿತ ಹೊಗೆಯಿಂದ ಈ ಭಾಗದಲ್ಲಿ ಓಡಾಡುವ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಹಾಗೂ ಹೊಗೆಯಿಂದ ಕಂಗೆಟ್ಟು ಹೋಗಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.