ADVERTISEMENT

ಸಿದ್ದರಾಜುಗೆ ಜಾನಪದ ಅಕಾಡೆಮಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 7:47 IST
Last Updated 5 ಜನವರಿ 2021, 7:47 IST
ಎಂ.ಕೆ.ಸಿದ್ದರಾಜು
ಎಂ.ಕೆ.ಸಿದ್ದರಾಜು   

ಆನೇಕಲ್: ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ನೀಡಲಾಗುವ ಜಾನಪದ ಅಕಾಡೆಮಿ ಪ್ರಶಸ್ತಿಗೆ ತಾಲ್ಲೂಕಿನ ಚಂದಾಪುರದ ನಿವೃತ್ತ ಶಿಕ್ಷಕ ಎಂ.ಕೆ.ಸಿದ್ದರಾಜು ಆಯ್ಕೆಯಾಗಿದ್ದಾರೆ.

2020ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ಎಂ.ಕೆ.ಸಿದ್ದರಾಜು, ವೃತ್ತಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಗಾಯನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಮೂಲಜನಪದ ಸಂಗೀತದ ಜತೆಗೆ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಹಾರ್ಮೋನಿಯಂ ಮತ್ತು ಕೀ-ಬೋರ್ಡ್‌ ವಾದನದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ನೂರಕ್ಕೂ ಹೆಚ್ಚು ಜಾನಪದ ಗೀತ ಗಾಯನ ಶಿಬಿರಗಳನ್ನು ನಡೆಸಿ ಮೂರು ಸಾವಿರಕ್ಕೂ ಹೆಚ್ಚು ಮಂದಿಗೆ ಜಾನಪದ ಗಾಯನ ತರಬೇತಿ ನೀಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುವ ಡಾ.ಜಗಜೀವನರಾಮ್‌ ರಾಜ್ಯ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.