ADVERTISEMENT

ಯೋಜನೆ ಸದ್ಬಳಕೆ; ಸಹಭಾಗಿತ್ವ ಬೇಕು : ಶಾಸಕ ನಿಸರ್ಗ ನಾರಾಯಣಸ್ವಾಮಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಚಾಲನೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 2:04 IST
Last Updated 9 ಸೆಪ್ಟೆಂಬರ್ 2020, 2:04 IST
ಚನ್ನರಾಯಪಟ್ಟಣ ಹೋಬಳಿ ಮಲ್ಲೆಪುರ ಗ್ರಾಮದಲ್ಲಿ ತಂಗುದಾಣ ನಿರ್ಮಾಣಕ್ಕೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಚಾಲನೆ ನೀಡಿದರು
ಚನ್ನರಾಯಪಟ್ಟಣ ಹೋಬಳಿ ಮಲ್ಲೆಪುರ ಗ್ರಾಮದಲ್ಲಿ ತಂಗುದಾಣ ನಿರ್ಮಾಣಕ್ಕೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಚಾಲನೆ ನೀಡಿದರು   

ವಿಜಯಪುರ: ‘ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪಬೇಕಾದರೆ ಜನರ ಸಹಭಾಗಿತ್ವ ಮುಖ್ಯ’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಗಂಗವಾರ ಚೌಡಪ್ಪನಹಳ್ಳಿ, ಸೋಮತ್ತನಹಳ್ಳಿ, ಮಲ್ಲೇಪುರ, ನಲ್ಲಪ್ಪನಹಳ್ಳಿ, ಹರಳೂರು, ಟಿ.ಅಗ್ರಹಾರ, ಯಲಿಯೂರು ಹ್ಯಾಡ್ಯಾಳ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಎರಡು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶಕ್ತಿ ಮೀರಿ ಕೆಲಸ ಮಾಡಲಾಗುತ್ತಿದೆ. ಈಗಾಗಲೇ ಸಿ.ಸಿ.ರಸ್ತೆ ಕಾಮಗಾರಿಗಳು, ಡಾಂಬರು ರಸ್ತೆಗಳ ನಿರ್ಮಾಣ, ಬಮೂಲ್ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ಬಸ್ ತಂಗುದಾಣ ನಿರ್ಮಾಣ, ಸಮುದಾಯ ಭವನಗಳ ನಿರ್ಮಾಣಕ್ಕೆ ಆದ್ಯತೆ, ಸೇರಿದಂತೆ ಜನರ ನಿರೀಕ್ಷೆಯಂತೆ ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡುವ ಕೆಲಸ ಮಾಡಲಾಗುತ್ತಿದೆ’ ಎಂದರು.

ADVERTISEMENT

ಜೆಡಿಎಸ್ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರವೀಂದ್ರ, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಮುನಿರಾಜು, ಜೆಡಿಎಸ್ ಹೋಬಳಿ ಘಟಕದ ಅಧ್ಯಕ್ಷ ಮುನಿರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.