ADVERTISEMENT

ಕಾರ್ಮಿಕರಿಗೆ ಉಚಿತ ಲಸಿಕೆ: ಎ. ಪ್ರಸಾದ್‌

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 4:19 IST
Last Updated 3 ಜೂನ್ 2021, 4:19 IST
ಸೂಲಿಬೆಲೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಶಾಸಕ ಶರತ್ ಬಚ್ಚೇಗೌಡ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದರು
ಸೂಲಿಬೆಲೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಶಾಸಕ ಶರತ್ ಬಚ್ಚೇಗೌಡ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದರು   

ಆನೇಕಲ್: ಬೊಮ್ಮಸಂದ್ರ ಕೈಗಾರಿಕಾ ಸಂಘದ ಐದು ಸಾವಿರ ಕಾರ್ಮಿಕರಿಗೆ ಉಚಿತವಾಗಿ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಕಾರ್ಮಿಕರು ಕೈಗಾರಿಕೆಗಳ ಆಸ್ತಿ. ಹಾಗಾಗಿ ಅವರ ಆರೋಗ್ಯದ ರಕ್ಷಣೆ ಮಾಡುವುದು ನಮ್ಮ ಬದ್ಧತೆಯಾಗಿದೆ ಎಂದು ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷ ಎ. ಪ್ರಸಾದ್‌ ತಿಳಿಸಿದರು.

ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಕಾರ್ಮಿಕರಿಗೆ ಉಚಿತವಾಗಿ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂಘದಿಂದ ನಾರಾಯಣ ಹೃದಯಾಲಯದ ಮೂಲಕ ಐದು ಸಾವಿರ ಮಂದಿ ಕಾರ್ಮಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಲಸಿಕೆ ವೆಚ್ಚವನ್ನು ಆಯಾ ಕಾರ್ಖಾನೆಗಳು ಭರಿಸಲಿವೆ. ಹಾಗಾಗಿ, ಕಾಯಂ ಕೇಂದ್ರವನ್ನು ಸಂಘದ ಕಚೇರಿಯಲ್ಲಿ
ಪ್ರಾರಂಭಿಸಲಾಗಿದೆ ಎಂದು
ತಿಳಿಸಿದರು.

ADVERTISEMENT

ಸಂಘವು ಕೊರೊನಾ ಸಂದರ್ಭದಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಮಾನವೀಯ ಸೇವೆಯಲ್ಲಿ ತೊಡಗಿಕೊಂಡಿದೆ. ಎರಡು ಸಾವಿರ ಆರೋಗ್ಯ ಕಿಟ್‌ಗಳನ್ನು ಸೋಂಕಿತರಿಗೆ ನೀಡಲಾಗಿದೆ. ಸಂಘದ ಮೂಲಕ 330 ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳು ಮತ್ತು 220 ಬೈಪ್ಯಾಕ್‌ಗಳನ್ನು ಗ್ರಾಮಾಂತರ ಭಾಗದ ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದರು.

ಅಪೋಟೆಕ್ಸ್‌ ಕಾರ್ಖಾನೆಯ ನಿರ್ದೇಶಕ ಯೋಗಾಂಜನೇಯ ರೆಡ್ಡಿ, ಬೊಮ್ಮಸಂದ್ರ ಕೈಗಾರಿಕಾ ಸಂಘವು ಕ್ರಿಯಾಶೀಲ ಕಾರ್ಯಕ್ರಮಗಳ ಮೂಲಕ ಕೈಗಾರಿಕಾ ಮಾಲೀಕರ ಮತ್ತು ಕಾರ್ಮಿಕರ ವಿಶ್ವಾಸಕ್ಕೆ ಪಾತ್ರವಾಗಿದೆ. ಕಳೆದ 15 ವರ್ಷಗಳಿಂದ ಸೊರಗಿದ್ದ ಸಂಘವು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಚೈತನ್ಯ ಪಡೆದಿದೆ ಎಂದು ತಿಳಿಸಿದರು.

ಸಂಘದ ಪದಾಧಿಕಾರಿಗಳಾದ ಸಂಜೀವ್‌ ಸಾವಂತ್‌, ನರೇಂದ್ರಕುಮಾರ್‌, ಮುರಳೀಧರ್‌, ರಾಜಶೇಖರ ಪಾಟೀಲ್, ವಾಸು,
ಮಲ್ಲಿಕಾರ್ಜುನಪ್ಪ, ನೀಲಕಂಠಯ್ಯ, ಸತೀಶ್‌ ಕುಮಾರ್‌, ಲಿಯೋ ಕ್ರಿಸ್ಟೋಫರ್, ರಾಜು ಮಡಿಕೇರಿ, ಗೋಪಾಲಸಿಂಗ್‌, ಕಿರಣ್‌ಕುಮಾರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.