ADVERTISEMENT

ಇಂದು ಗಾಂಧಿ ಜಯಂತಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2023, 23:09 IST
Last Updated 1 ಅಕ್ಟೋಬರ್ 2023, 23:09 IST

ದೇವನಹಳ್ಳಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 154ನೇ ಜಯಂತಿ ಅ.2ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ ಏರ್ಪಡಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭೆ ಸದಸ್ಯ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಶಾಸಕರಾದ ಎಸ್.ರವಿ, ಎನ್.ನಾಗರಾಜು, ಅ.ದೇವೇಗೌಡ, ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್, ನೆಲಮಂಗಲ, ಶಾಸಕ ಎನ್ ಶ್ರೀನಿವಾಸ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ.ಫಾಹಿಂ, ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಮ್ಮ, ಉಪಾಧ್ಯಕ್ಷ ಮುನಿರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ADVERTISEMENT

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.