ವಿಜಯಪುರ: ಶ್ರಾವಣಮಾಸದ ಅಂಗವಾಗಿ ಇಲ್ಲಿನ ರಹಮತ್ ನಗರದಲ್ಲಿನ ಭಾನುವಾರ ಓಂಶಕ್ತಿ ದೇವಾಲಯದಲ್ಲಿ ಗಂಜಿಪೂಜೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಇದರ ಅಂಗವಾಗಿ ಕೆಂಪು ವಸ್ತ್ರಧಾರಿಗಳಾಗಿದ್ದ ನೂರಾರು ಮಂದಿ ಮಹಿಳೆಯರು ಮನೆಗಳಲ್ಲಿ ತಯಾರಿಸಿದ್ದ ಗಂಜಿಯನ್ನು ಹೊಸ ಮಡಿಕೆಯಲ್ಲಿ ತುಂಬಿಕೊಂಡು, ಮಡಕೆಯನ್ನು ತಲೆಯ ಮೇಲೆ ಹೊತ್ತುಕೊಂಡು ಓಂಶಕ್ತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕೈಯಲ್ಲಿ ಬೇವಿನ ಸೊಪ್ಪನ್ನು ಹಿಡಿದುಕೊಂಡು ಓಂ ಶಕ್ತಿ..ಪರಾಶಕ್ತಿ...ಓಂ ಶಕ್ತಿ..ಪರಾಶಕ್ತಿ.. ಓಂ..ಓಂ..ಶಕ್ತಿಯೇ ಆದಿಪರಾಶಕ್ತಿಯೇ..ಎನ್ನುವ ಘೋಷಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಪೂಜೆಗೆ ಮೆರುಗು ತಂದರು.
ದೇವಾಲಯದ ಆವರಣದಲ್ಲಿ ವಿಶೇಷ ನೃತ್ಯದ ಮೂಲಕ ದೇವಿಗೆ ಪೂಜೆ ಸಲ್ಲಿಸಿದರು. ಓಂ ಶಕ್ತಿ ಮಾಲೆ ಧರಿಸಿದ್ದ ಮಕ್ಕಳೂ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.