
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ದೊಡ್ಡಬಳ್ಳಾಪುರ: ತಾಲ್ಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ಶನಿವಾರ ಸ್ನಾನಕ್ಕೆ ಹೋಗಿದ್ದ ಬಾಲಕಿಯೊಬ್ಬಳು ಸ್ನಾನದ ಕೋಣೆಯಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ.
ಬಿಂದುಶ್ರೀ ಶಂಕರಪ್ಪ (15) ಮೃತ ಬಾಲಕಿ.
ಗ್ಯಾಸ್ ಗೀಸರ್ನಿಂದ ಹೊರ ಹೊಮ್ಮುವ ವಿಷಾನಿಲದಿಂದ ಬಾಲಕಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.