ದೇವನಹಳ್ಳಿ: ಗುದ ದ್ವಾರದಲ್ಲಿ ಮೂರು ರಬ್ಬರ್ ಕ್ಯಾಪ್ಸುಲ್ ಮೂಲಕ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬ್ಯಾಂಕಾಕ್ನಿಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮಾರ್ಪಾಡು ಮಾಡಿ ಅದನ್ನು ಮೂರು ರಬ್ಬರ್ ಕ್ಯಾಪ್ಸುಲ್ಗಳಲ್ಲಿ ತುಂಬಿ ಗುದದಲ್ಲಿ ಇರಿಸಿಕೊಂಡು ಕಳ್ಳ ಸಾಗಣೆ ಮಾಡಲು ಯತ್ನಿಸುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾನೆ.
ಬಂಧಿತನಿಂದ 442.34 ಗ್ರಾಂ. ಚಿನ್ನ ವಶಕ್ಕೆ ಪಡೆಯಲಾಗಿದ್ದು, ಅದರ ಮೌಲ್ಯ ₹ 22.33 ಲಕ್ಷ ಎಂದು ಅಂದಾಜಿಸಲಾಗಿದೆ.
ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.