ದೇವನಹಳ್ಳಿ: ‘ಜನಸ್ಪಂದನ’ ಸಮಸ್ಯೆಗಳ ನಿವಾರಣೆಗೆ ಒಂದು ಉತ್ತಮ ಪ್ರಯತ್ನ. ಈ ವೇದಿಕೆಯಲ್ಲಿ ಎಲ್ಲ ಅಧಿಕಾರಿಗಳು ಭಾಗವಹಿಸಿದ್ದಾರೆ. ಕೆಲವು ಸಮಸ್ಯೆಗಳಿಗೆ ಪರಿಹಾರ ಸಿಗಬಹುದು. ನಮಗೆ ಜ್ವಲಂತ ಸಮಸ್ಯೆಗಳಾದ ಕಲ್ಲು ಗಣಿಗಾರಿಕೆ ನಿಷೇಧವಾಗಬೇಕು.
-ಮುದ್ದನಾಯಕನಹಳ್ಳಿ ರಮೇಶ್
*
ಆರು ತಿಂಗಳಿಗೊಮ್ಮೆ ನಡೆಯಲಿ
ದೇವನಹಳ್ಳಿ: ಪ್ರತಿ ಆರು ತಿಂಗಳಿಗೊಮ್ಮೆ ಜನಸ್ಪಂದನ ನಡೆದರೆ ಆನೇಕ ಸಮಸ್ಯೆಗಳ ನಿವಾರಣೆಗೆ ಅನುಕೂಲವಾಗಲಿದೆ. ಜನಪ್ರತಿನಿಧಿಗಳು ಅಧಿಕಾರಿಗಳು ಮಾಡಬೇಕಾದ ಕೆಲಸವನ್ನು ಪತ್ರಿಕೆ ಮಾಡಿದೆ ಶ್ಲಾಘನೀಯ. ವೇದಿಕೆಯಲ್ಲಿ ಪ್ರಸ್ತಾಪವಾದ ಸಮಸ್ಯೆಗಳು ಹಾಗೂ ಸಲಹೆಗಳ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಾಗಿದೆ.
-ಸೂರ್ಯಕಲಾ,ಮಹಿಳಾ ಗ್ರಾಮಾಭಿವೃದ್ಧಿ ಸಂಸ್ಥೆ ಅಧ್ಯಕ್ಷೆ
*
ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ
ದೇವನಹಳ್ಳಿ: ಜನಪ್ರತಿನಿಧಿಗಳನ್ನು ಮತ್ತು ಅಧಿಕಾರಿಗಳನ್ನು ಎಚ್ಚರಿಸುವ ಇಂಥ ಪ್ರಯತ್ನ ಪ್ರಯೋಜನಕಾರಿಯಾಗಬೇಕು. ಒಂದು ದಿನ ಸಮಸ್ಯೆಗಳ ಚರ್ಚಗೆ ಮಿಸಲಿಟ್ಟಿದ್ದರೆ ಮತ್ತಷ್ಟು ದೂರುಗಳಿಗೆ ಸ್ಪಂದನೆ ಸಿಗುವ ನಿರೀಕ್ಷೆ ಇತ್ತು.
-ಗೊಡ್ಲುಮುದ್ದೇನಹಳ್ಳಿ ಮುನಿರಾಜು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.