ವಿಜಯಪುರ: ‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪ್ರತಿಯೊಂದು ಮತವೂ ಅಭ್ಯರ್ಥಿಗಳ ಗೆಲುವಿಗೆ ಪ್ರಧಾನ ಪಾತ್ರವಹಿಸುತ್ತದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಕೆಲಸ ಮಾಡಬೇಕು’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ಚನ್ನರಾಯಪಟ್ಟಣ ಹೋಬಳಿಯ ಗಂಗವಾರ ಚೌಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕರ್ತರು ಮನೆ ಮನೆಗೆ ತೆರಳಿ ಕ್ಷೇತ್ರದಲ್ಲಿ ಆಗುತ್ತಿರುವ ಅಭಿವೃದ್ಧಿ ಕಾರ್ಯಕ್ರಮ ಕುರಿತು ಮನವರಿಕೆ ಮಾಡಿಕೊಡಬೇಕು ಎಂದರು.
ಮುಖಂಡ ಜಯರಾಮೇಗೌಡ ಮಾತನಾಡಿದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ತಾಲ್ಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರವೀಂದ್ರ, ಹೋಬಳಿ ಘಟಕದ ಅಧ್ಯಕ್ಷ ಮುನಿರಾಜು, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಗುರಪ್ಪ, ಮೇನಕಾ ಕೃಷ್ಣಮೂರ್ತಿ, ಸಿ.ಎಸ್. ರಾಜಣ್ಣ, ನಾರಾಯಣಸ್ವಾಮಿ, ಶಿವರಾಜ್, ಮನೋಹರ್, ರಾಜಣ್ಣ, ಶಂಕರ್, ಶಿವಾನಂದ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.