ADVERTISEMENT

ಅತ್ತಿಬೆಲೆವರೆಗೆ ಮೆಟ್ರೊ: ಎಚ್‌ಡಿಕೆ ಇಂಗಿತ

ಕಾರ್ಯಕರ್ತರಿಂದ ಹೂಮಳೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 1 ಮೇ 2022, 19:00 IST
Last Updated 1 ಮೇ 2022, 19:00 IST
ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ
ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ   

ಆನೇಕಲ್: ‘ಅತ್ತಿಬೆಲೆಗೆ ಮೆಟ್ರೊ ರೈಲು ತರುವ ಸಂಬಂಧ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಈ ಭಾಗದ ಜನರಿಗೆ ಅನುಕೂಲ ಮಾಡುವ ಉದ್ದೇಶ ನಮ್ಮದಾಗಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಜನತಾ ಜಲಧಾರೆ ಕಾರ್ಯಕ್ರಮ ದಲ್ಲಿ ಮಾತನಾಡಿ, ‘ರಾಜ್ಯದಲ್ಲಿ ತೆರಿಗೆ ಹಣ ಲೂಟಿಯಾಗುತ್ತಿದೆ. ಶೇ 40ರಷ್ಟು ಕಮಿಷನ್‌ ಬಗ್ಗೆ ಚರ್ಚೆಯಾಗುತ್ತಿದೆ. ರಾಷ್ಟ್ರೀಯ ಪಕ್ಷಗಳು ಪರಸ್ಪರ ಕೆಸರೆರಚಾಟ ನಡೆಸುತ್ತಿವೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT