ADVERTISEMENT

ಆರೋಗ್ಯ ತಪಸಣೆ ಶಿಬಿರ

​ಪ್ರಜಾವಾಣಿ ವಾರ್ತೆ
Published 4 ಮೇ 2019, 13:47 IST
Last Updated 4 ಮೇ 2019, 13:47 IST
ಶಿಬಿರದಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರು
ಶಿಬಿರದಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರು   

ಹೊಸಕೋಟೆ: ಶ್ರೀ ಸತ್ಯ ಸಾಯಿ ಸೇವಾಕೇಂದ್ರ ಹಾಗೂ ಸೌಖ್ಯ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಹೊಸಕೋಟೆಯ ಶ್ರೀ ವಿವೇಕಾನಂದ ವಿದ್ಯಾಕೇಂದ್ರ ಶಾಲೆಯಲ್ಲಿ ಉಚಿತ ಆಯುರ್ವೇದ ಮತ್ತು ಹೋಮಿಯೋಪಥಿ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿ ತಿಂಗಳ ಮೊದಲನೆಯ ಶನಿವಾರ ನಡೆಯುವ ಈ ಶಿಬಿರದಲ್ಲಿ ಸಮಾಲೋಚನೆ ಮಾಡಿ ಔಷಧಿ ನೀಡಲಾಗುತ್ತಿದೆ. ರೋಗ ಪರಿಶೀಲನೆ, ಶ್ವಾಸಕೋಶದ ಕಾರ್ಯ ಪರಿಶೀಲನೆ ಮತ್ತು ಮಹಿಳೆಯರ ಆರೋಗ್ಯಕ್ಕೆ ಚಿಕಿತ್ಸೆ ನೀಡಲಾಗುವುದು. ಶಿಬಿರದಲ್ಲಿ ಹೊಸಕೋಟೆ ನಗರ ಹಾಗೂ ಸುತ್ತಲಿನ ಜನರು ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತಷ್ಟು ಜನರು ಸದುಪಯೋಗ ಪಡೆದುಕೊಂಡರೆ ಶಿಬಿರ ಯಶಸ್ವಿಯಾಗುತ್ತದೆ ಎಂದು ಸತ್ಯಸಾಯಿ ಸೇವಾ ಕೇಂದ್ರದ ಸಂಯೋಜಕರಾದ ರಾಜಗೋಪಾಲ್ ಹಾಗೂ ಧರ್ಮೆಂದ್ರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT