ದೊಡ್ಡಬಳ್ಳಾಪುರ: ರಾಜಸ್ಥಾನದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಘಟಕದಿಂದ ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ಕನ್ಹಯ್ಯ ಲಾಲ್ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿರುವುದು ಖಂಡನೀಯ. ಈ ಕೃತ್ಯಕ್ಕೆ ಮುಂಚೆ ಬೆದರಿಕೆಯೊಡ್ಡಿದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೃತ್ಯ ಎಸಗಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಕೃತ್ಯವನ್ನು ವೈಭವೀಕರಿಸಿ ಪ್ರಧಾನ ಮಂತ್ರಿ ಅವರಿಗೂ ಬೆದರಿಕೆ ಒಡ್ಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ದೇಶದ್ರೋಹಿ ಸಂಘಟನೆಗಳೊಂದಿಗೆ ಆರೋಪಿಗಳು ಭಾಗಿಯಾಗಿರುವುದನ್ನು ರಾಷ್ಟ್ರೀಯ ತನಿಖಾ ದಳ ದೃಢಪಡಿಸಿದೆ. ಈ ಸಂಘಟನೆಗಳು ಈಗಾಗಲೇ ದೇಶದಲ್ಲಿ ಹಲವು ದೇಶದ್ರೋಹಿ ಕೃತ್ಯಗಳನ್ನು ಹಲವಾರು ವರ್ಷಗಳಿಂದಅವ್ಯಾಹತವಾಗಿ ನಡೆಸುತ್ತಾ ಬರುತ್ತಿವೆ ಎಂದು ಆರೋಪಿಸಿದರು.
ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.