ಹೊಸಕೋಟೆ: ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಭಾನುವಾರ ಭಾರಿ ಮಳೆಯಾಗಿದೆ. ಬೆಳಗ್ಗಿನಿಂದಲೇ ಮೋಡ ಮುಸುಕಿದ ವಾತಾವರಣವಿತ್ತು. ಮದ್ಯಾಹ್ನದ ವೇಳೆಗೆ ಮಳೆ ಆರಂಭವಾಯಿತು. ನಂತರ ಕೆಲಕಾಲ ಬಿಡುವು ಕೊಟ್ಟ ಮಳೆ ಸಂಜೆ ಮತ್ತೊಮ್ಮೆ ಸುರಿಯಲು ಪ್ರಾರಂಭಿಸಿತು.
ನಗರದ ಪ್ರಮುಖ ರಸ್ತೆ ಸೇರಿದಂತೆ ಬಹುತೇಕ ಕಡೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಚರಂಡಿ ನೀರು ರಸ್ತೆಯಲ್ಲಿ ಹರಿಯಿತು. ಇದರಿಂದ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.