ಹೊಸಕೋಟೆ: ನಿರಂತರ ಭಾರಿ ವಾಹನಗಳ ಓಡಾಟದಿಂದ ದೇವನಗೊಂದಿ-ಐಒಸಿ ರಸ್ತೆಯ ರೈಲ್ವೇಗೇಟ್ ಸಮೀಪದ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಇಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿದೆ.
ರಸ್ತೆ ಮಾರ್ಗದಲ್ಲಿ ಹಲವು ಕಾರ್ಖಾನೆಗಳಿವೆ. ಇಲ್ಲಿಂದ ಬೇರೆಡೆಗೆ ಪೆಟ್ರೋಲ್, ಡೀಸೆಲ್ ಸಾಗಣೆಗೆ ನಿತ್ಯ ಸಾವಿರಾರು ಭಾರಿ ವಾಹನ ಸಂಚರಿಸುತ್ತವೆ. ಇದರಿಂದ ರಸ್ತೆಯ ಗುಂಡಿಮಯವಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದ್ದ ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ.
ದೇವನಗೊಂದಿ ರೈಲ್ವೆ ನಿಲ್ದಾಣದ ದೇವಲಾಪುರದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಚರಂಡಿ ನೀರು ರಸ್ತೆಯಂಚಿನಲ್ಲಿ ಹರಿಯುತ್ತಿದ್ದು, ಗುಂಡಿಗಳಿಗೆ ನೀರು ತುಂಬಿಕೊಂಡು ಇನ್ನಷ್ಟು ಅಧ್ವಾನವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.