
ಪ್ರಜಾವಾಣಿ ವಾರ್ತೆ
ಹೊಸಕೋಟೆ: ತಾಲ್ಲೂಕಿನ ಚಿಕ್ಕಹುಲ್ಲೂರು ಗ್ರಾಮದಲ್ಲಿರುವ ಗ್ರಾಮದೇವತೆ ಸತ್ಯಮ್ಮದೇವಿ ದೇವಾಲಯ ಮತ್ತು ಭದ್ರಕಾಳಿ ಅಮ್ಮನವರ ದೇವಾಲಯದ ಜೀರ್ಣೋದ್ಧಾರ ಮತ್ತು ಮೂರ್ತಿಯ ಪ್ರತಿಷ್ಠಾಪನೆಯು ನ.5 ರಂದು ನಡೆಯಲಿದೆ ಎಂದು ದೇಗುಲದ ಅರ್ಚಕ ಮುನಿರಾಜು ತಿಳಿಸಿದ್ದಾರೆ.
ನ.4 ರಂದು ಮಂಗಳವಾರ ಗೋದೂಳಿ ಲಗ್ನದಲ್ಲಿ ಧಾರ್ಮಿಕ ಕೈಂಕರ್ಯ ಜರುಗಲಿದೆ. ನ.5 ರಂದು ಬುಧವಾರ ಹುಣ್ಣಿಮೆ ದಿನ ಬೆಳಗ್ಗೆ 5 ರಿಂದ 6 ಗಂಟೆಯಲ್ಲಿ ಭದ್ರಕಾಳಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಎರಡು ದಿನಗಳ ಪೂಜಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.