ADVERTISEMENT

ಕೌಟುಂಬಿಕ ಕಲಹ: ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 5:30 IST
Last Updated 7 ಮಾರ್ಚ್ 2023, 5:30 IST
   

ವಿಜಯಪುರ(ದೇವನಹಳ್ಳಿ): ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಬ್ಬರಗುಂಟೆಯಲ್ಲಿ ಸೋಮವಾರ ಕೌಟುಂಬಿಕ ಕಲಹದಿಂದ ಪತಿ ತನ್ನ ಪತ್ನಿಯ ಎರಡು ಕೈಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಗೊಬ್ಬರಗುಂಟೆ ಗ್ರಾಮದ ಮುನಿಕೃಷ್ಣ(48) ಹಲ್ಲೆ ನಡೆಸಿರುವ ವ್ಯಕ್ತಿ. ಚಂದ್ರಮ್ಮ(45) ಗಾಯಗೊಂಡಿರುವ ಮಹಿಳೆ.

ಚಂದ್ರಮ್ಮ ಅವರ ಎರಡೂ ಕೈಗಳಿಗೆ ಗಂಭೀರವಾಗಿ ಗಾಯವಾಗಿದ್ದು, ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಮಾಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ವಿಜಯಪುರ ಪೊಲೀಸರು ಆರೋಪಿಗೆ ಹುಡುಕಾಟ ನಡೆಸುತ್ತಿದ್ದಾರೆ.

ದಂಪತಿಗೆ ಮೂವರು ಮಕ್ಕಳಿದ್ದಾರೆ. ಗಂಡನ ಕಿರುಕುಳದಿಂದ ಬೇಸತ್ತಿದ್ದ ಚಂದ್ರಮ್ಮ ತನ್ನ ಮಕ್ಕಳು ಹಾಗೂ ಮೊಮ್ಮಕ್ಕಳೊಂದಿಗೆ ಆರು ತಿಂಗಳಿನಿಂದ ಪ್ರತ್ಯೇಕವಾಗಿ ವಾಸವಾಗಿದ್ದರು.

ತಾಯಿ ಮತ್ತು ಮಗಳು ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಸೋಮವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾದ ಚಂದ್ರಮ್ಮ ಅವರ ಮೇಲೆ ಮುನಿಕೃಷ್ಣ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಎರಡೂ ಕೈಗಳಿಗೆ ಗಂಭೀರವಾದ ಗಾಯವಾದ್ದು, ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ.

ಪತಿ–ಪತ್ನಿಯ ನಡುವೆ ಆಗ್ಗಾಗ್ಗೆ ಜಗಳ ನಡೆಯುತ್ತಿತು. ಗ್ರಾಮಸ್ಥರು ಸೇರಿದಂತೆ ಪಂಚಾಯಿತಿಯವತರು ಬುದ್ದಿವಾದ ಹೇಳಿದ್ದರು. ಆದರೂ ತನ್ನ ಹೆಂಡತಿ, ಮಕ್ಕಳ ಮೇಲೆ ಗಲಾಟೆ ಮಾಡುವುದನ್ನು ಮುನಿಕೃಷ್ಣ ಮುಂದುರೆಸಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.