
ಹೊಸಕೋಟೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಭೂತಾತ್ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ಕಾಲೇಜಿನ ಆರ್. ಚರಣ್, ಎ.ಎನ್. ಲಿಖಿತ್ ಮತ್ತು ಜಿ. ಸೃಜನ್ ಭಾರತ ತಂಡದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಮೂವರು ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಆತ್ಮೀಯವಾಗಿ ಬೀಳ್ಕೊಡಿಗೆ ನೀಡಿ, ಗೆದ್ದು ಬರುವಂತೆ ಸಿಬ್ಬಂದಿ ಹಾರೈಸಿದರು.
ಕಬಡ್ಡಿಯ ಕೋಚ್ ರವಿಕಿರಣ್ ಕಳೆದ 3 ತಿಂಗಳಿನಿಂದ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಅಶೋಕ ಬಾಬು ತರಬೇತಿಯ ಜೊತೆಗೆ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ ಎಂದು ಪ್ರಾಂಶುಪಾಲ ರಾಮಲಿಂಗಪ್ಪ ಟಿ. ಬೇಗೂರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.