ದೇವನಹಳ್ಳಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2019–20ನೇ ಸಾಲಿಗೆ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಂ. 215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ. ದೂರವಾಣಿ 080 29787440 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.