ADVERTISEMENT

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 4:35 IST
Last Updated 18 ಜೂನ್ 2021, 4:35 IST

ದೇವನಹಳ್ಳಿ: ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಕಲಿಕೆ ಭಾಗ್ಯ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

http://serviceonline.gov.in/karnataka ಮೂಲಕ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ‌ ದಿನ. ಮಂಡಳಿಯಲ್ಲಿ ನೋಂದಣಿಯಾಗಿರುವ ಕುರಿತು ದಾಖಲೆ (ಸ್ಮಾರ್ಟ್‌ಕಾರ್ಡ್ ಅಥವಾ ಗುರುತಿನ ಚೀಟಿಯ ದೃಢೀಕೃತ ಪ್ರತಿ), ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ದೃಢೀಕೃತ ಅಂಕಪಟ್ಟಿ ಮತ್ತು ವ್ಯಾಸಂಗ ಪ್ರಮಾಣ ಪತ್ರ ಸಲ್ಲಿಸಬೇಕು.

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಮಗುವಿನ ತಂದೆ ಅಥವಾ ತಾಯಿ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿದ್ದು, ಕಟ್ಟಡ ಕಾರ್ಮಿಕರ ಮಂಡಳಿಯಲ್ಲಿ ನೋಂದಣಿಯಾಗಿರಬೇಕು. ನೋಂದಣಿ ಚಾಲ್ತಿಯಲ್ಲಿ ಇರಬೇಕು.

ADVERTISEMENT

ಹೆಚ್ಚಿನ ಮಾಹಿತಿಗೆ ಕಾರ್ಮಿಕ ‌ಸಹಾಯವಾಣಿ:155214(24/7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ‌ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು,‌‌ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಬಹುದುಎಂದುಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.