ಬೇತಮಂಗಲ: ರಾಷ್ಟ್ರದ ಅಭಿವೃದ್ಧಿ ಹೆಸರಿನಲ್ಲಿ ಮರಗಳ ಮಾರಣಹೋಮ ನಡೆಯುತ್ತಿದೆ. ಅಭಿವೃದ್ಧಿಯ ಜೊತೆಗೆ ಪರಿಸರ ಸಂರಕ್ಷಣೆಗೂ ಆದ್ಯತೆ ನೀಡಬೇಕು ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಕುಮಾರ್ ಹೇಳಿದರು.
ಕೆಜಿಎಫ್ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ಪ್ರಾದೇಶಿಕ ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ರಾಮಸಾಗರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.
ನಗರ ಪ್ರದೇಶಕ್ಕಿಂತ ಹಳ್ಳಿ ಭಾಗದ ಜನತೆಯೂ ಪರಿಸರಕ್ಕಾಗಿ ಗಿಡ– ಮರ ಪೋಷಿಸಬೇಕಿದೆ. ಇದರಿಂದ ಹಚ್ಚ ಹಸಿರಿನಿಂದ ಕೂಡಿರುವ ಹಳ್ಳಿ ಪರಿಸರ ಮತ್ತಷ್ಟು ಕಂಗೊಳಿಸಲಿದೆ. ಆರೋಗ್ಯ ಪರಿಸರ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಕೆಜಿಎಫ್ ನ್ಯಾಯಾಲಯದ ನ್ಯಾಯಾಧೀಶ ಶಿವಕುಮಾರ್, ಹಿರಿಯ ಶ್ರೇಣಿ ನ್ಯಾಯಾಧೀಶರಾದ ಜಯಲಕ್ಷ್ಮಿ, ಅಪರ ಹಿರಿಯ ನ್ಯಾಯಾಧೀಶ ಮುಜಫರ್ ಮಾಂಜರಿ, ಪ್ರಧಾನ ಸಿವಿಲ್ ನ್ಯಾಯಾಧೀಶ ವಿನೋದ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ರಾಜಗೋಪಾಲ್ ಗೌಡ, ಉಪಾಧ್ಯಕ್ಷ ಮಣಿ ವಣ್ಣನ್, ಪ್ರಧಾನ ಕಾರ್ಯದರ್ಶಿ ನಾಗರಾಜ್, ಬಿಇಓ ಅನಿತಾ, ಪಿಎಸೈನಾರಾಯಣ ಸ್ವಾಮಿ, ಅರಣ್ಯ ಇಲಾಖೆಯ ಅಧಿಕಾರಿ ನಂದೀಶ್, ಶಿಕ್ಷಣ ಇಲಾಖೆಯ ಅಶ್ವಥ್, ಗ್ರಾ.ಪಂ ಅಧ್ಯಕ್ಷ ಚಂದ್ರಪ್ಪ, ಕಾರ್ಯದರ್ಶಿ ಬ್ಯಾಟಪ್ಪ, ಮುಖ್ಯ ಶಿಕ್ಷಕ ಶ್ರೀನಿವಾಸ್, ಗ್ರಾ.ಪಂ ಉಪಾಧ್ಯಕ್ಷೆ ಶಶಿಕಲಾ, ಗ್ರಾಪಂ ಸದಸ್ಯರಾದ ಶ್ವೇತ ಅಶ್ವಥ್ ನಾಯ್ಡು, ಸರೋಜಮ್ಮ, ಲಕ್ಷ್ಮಮ್ಮ, ಪಾಪಮ್ಮ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.